Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಯಿಂದ 500 ಎಕರೆ ಭೂಮಿ

Facebook
Twitter
Telegram
WhatsApp

 

 

ಬೆಂಗಳೂರು: ಎತ್ತಿನಹೊಳೆ ಯೋಜನೆ ಮಾಡಲು ಬಿರುಸಿನ ಕೆಲಸಗಳು ನಡೆಯುತ್ತಿವೆ. ಆದರೆ ಈ ಯೋಜನೆಗೆ 500ಎಕರೆ ಭೂಮಿಯ ಅವಶ್ಯಕತೆ ಇದ್ದು, ಇದೀಗ ಅರಣ್ಯ ಇಲಾಖೆ ಈ ಭೂಮಿಯನ್ನು ಕೊಡುವುದಕ್ಕೆ ತೀರ್ಮಾನ ಮಾಡಿದೆ. ಕೃಷ್ಣ ಭೈರೇಗೌಡ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಜೊತೆಗೆ ಸಮನ್ವಯ ಸಭೆ ನಡೆಸಿ, ಆ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮರ್ ಅವರು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸಭೆ ಕರೆಯಲಾಗಿದೆ. ಈಗ ಅರಣ್ಯ ಇಲಾಖೆಯು ಭೂಮಿಯನ್ನು ನೀಡುವುದಕ್ಕೆ ಒಪ್ಪಿಗೆ ನೀಡಿದೆ. ಕಂದಾಯ ಇಲಾಖೆಗೆ ಪರ್ಯಾಯವಾಗಿ 500 ಎಕರೆಯನ್ನು ಬೇರೆ ಸ್ಥಳದಲ್ಲು ನೀಡಲಿದೆ. ನಾವೂ ಈ ಪ್ರಕ್ರಿಯೆಯನ್ನು ಕಾನೂನಿನ ಚೌಕಟ್ಟಿನ ಒಳಗೆಯೇ ಪೂರ್ಣಗೊಳಿಸುತ್ತೇವೆ‌ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಯನ್ನು ಗಮನಿಸಿ ಗುರುತಿಸಿಕೊಳ್ಳಲಾಗಿದೆ. 60 ಕಿ.ಮೀ ವ್ಯಾಪ್ತಿಯಲ್ಲಿ ಕನಿಷ್ಠ 20 ಸಮಸ್ಯೆಗಳನ್ನು ಪರಿಹರಿಸಬೇಕು. ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆಗಳೊಂದಿಗೆ ಅರಣ್ಯ ಇಲಾಖೆ ಜಂಟು ಸಮೀಕ್ಷೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿರುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರಿಗೆ ಕೆಲವೆಡೆ 51 ಕೋಟಿ ರೂಪಾಯಿ ಪಾವತಿಸಬೇಕಿದ್ದು, ಅದರಲ್ಲಿ ಈಗಾಗಲೇ 10 ಕೋಟಿ ರೂಪಾಯಿ ಪಾವತಿಸಲಾಗಿದೆ. ಅರಣ್ಯ ಅಥವಾ ಕಂದಾಯ ಇಲಾಲಕೆಗೆ ಸೇರಿದ ಜಮೀನಿನ ಕುರಿತು ಕೆಲ ಗೊಂದಲಗಳಿದ್ದು, ಅವುಗಳನ್ನು ಸಚಿವ ಸಂಪುಟದ ಮುಂದೆ ಇಟ್ಟು ವಿಂಗಡಿಸಲಾಗುವುದು. ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿ ಬಳಿ ಸಮತೋಲನ ಜಲಾನಯನ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದ್ದು, ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕವಾಡಿಗರ ಹಟ್ಟಿ ಅಭಿವೃದ್ದಿಗೆ ಕ್ರಮ :  ನಗರಸಭೆ ಆಯುಕ್ತೆ ರೇಣುಕಾ ಸ್ಪಷ್ಟನೆ

ಚಿತ್ರದುರ್ಗ ಜೂ. 18 : ನಗರದ ಹೊರ ವಲಯದಲ್ಲಿರುವ ಕವಾಡಿಗರ ಹಟ್ಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿದ್ದು, ತ್ವರಿತ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.   ಕಳೆದ

ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಎಂದು ಉದಾಸೀನ ಮಾಡಬೇಡಿ : ಡಾ.ಬಿ.ಗುರುರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.18 : ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಉದಾಸೀನ ಮಾಡಬೇಡಿ. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ

ಚಿತ್ರದುರ್ಗ | ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸ : ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್ 18 : ಎ.ಪಿ.ಎಂ.ಸಿ. ಆವರಣದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ

error: Content is protected !!