Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

---Advertisement---

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ ದಾಟಿದೆ. ಇದು ರೈತರ ಮೊಗದಲ್ಲಿ ಸಂತಸವನ್ನು ತರಿಸಿದೆ.

ಅಡಿಕೆ ಬೆಲೆಯಲ್ಲಿ ಒಂದೇ ದಿ‌ಕ್ಕೆ 600 ರೂಪಾಯಿ ಬೆಲೆ ಏರಿಕೆಯಾಗಿದೆ. ಈ ಮೂಲಕ 51 ಸಾವಿರ ರೂಪಾಯಿಗಳತ್ತ ದಾಪುಗಾಲು ಇಟ್ಟಿದೆ. ಇನ್ನು ಮುಂದೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಒಂದು ಕಡೆ ಅಡಿಕೆ ಬೆಲೆ ಏರಿಕೆಯಾಗುತ್ತಿದೆ‌ ಎಂದು ಖುಷಿ ಪಡುವ ರೈತನಿಗೆ, ಮತ್ತೊಂದು ಸಂಕಷ್ಟ ಕೂಡ ಎದುರಾಗಿದೆ. ಮಳೆ ಇಲ್ಲದೆ ಅಡಿಕೆ ಗಿಡಗಳು ಒಣಗಿ ಹೋಗುತ್ತಿವೆ. ದಾವಣಗೆರೆ, ಚಿತ್ರದುರ್ಗ ಭಾಗದ ರೈತರಲ್ಲಿ ಈ ಚಿಂತೆ ಮನೆ ಮಾಡಿದೆ. ಭದ್ರಾ ನಾಲೆಯ ನೀರಾದರೂ ಸಿಕ್ಕರೆ ಇರುವ ಅಡಿಕೆ ಬೆಲೆಯನ್ನು ಉಳಿಸಿಕೊಳ್ಳಬಹುದು.

ಚನ್ನಗಿರಿಯ ಕೆಲವು ಭಾಗಗಳಿಗೆ ಮಾತ್ರ ಭದ್ರಾ ನಾಲೆಯ ನೀರು ಸಿಗುತ್ತಿದೆ. ಉಳಿದ ಭಾಗದಲ್ಲಿ ಬೋರ್ ವೆಲ್ ನೀರನ್ನೇ ನಂಬಿಕೊಂಡಿದ್ದಾರೆ. ಅಂತರ್ಜಲ ಕುಸಿತದಿಂದಾಗಿ ಬೋರ್ವೆಲ್ ನೀರು ಕೂಡ ಕುಸಿತವಾಗಿದೆ. ಬಿಸಿಲಿನ ಧಗೆ ಹೆಚ್ಚಾಗಿರುವ ಕಾರಣ ಈಗ ಎಷ್ಟೇ ಲಾಭ ಬಂದರು ಅದರಿಂದ ಗಿಡಗಳನ್ನು ಉಳಿಸಿಕೊಳ್ಳುವುದಕ್ಕೇನೆ ಖರ್ಚು ಮಾಡಲಾಗುತ್ತಿದೆ. ಚನ್ನಗಿರಿಯಲ್ಲಿ ವಿಶ್ವದಲ್ಲಿಯೇ ಖ್ಯಾತಿ ಪಡೆದಿರುವ ಸೂಳೇಕೆರೆ ಇದೆ. ಆದರೂ ಅಲ್ಲಿನ ನೀರು ಸಿಗುತ್ತಿಲ್ಲ ಎಂದು ಸ್ಥಳೀಯ ರೈತರು ಬೇಸರ ಹೊರ ಹಾಕುತ್ತಿದ್ದಾರೆ. ಚನ್ನಗಿರಿ ವಹಿವಾಟಿನಲ್ಲಿ ಪ್ರತಿ ಕ್ವಿಂಟಾಲ್ ಉತ್ತನ ರಾಶಿ ಅಡಿಕೆ ಕನಿಷ್ಠ 48,400 ರೂಪಾಯಿಗಳಿದ್ದು, ಗರಿಷ್ಠ ಬೆಲೆ 49,699 ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...