Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

Facebook
Twitter
Telegram
WhatsApp

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ ದಾಟಿದೆ. ಇದು ರೈತರ ಮೊಗದಲ್ಲಿ ಸಂತಸವನ್ನು ತರಿಸಿದೆ.

ಅಡಿಕೆ ಬೆಲೆಯಲ್ಲಿ ಒಂದೇ ದಿ‌ಕ್ಕೆ 600 ರೂಪಾಯಿ ಬೆಲೆ ಏರಿಕೆಯಾಗಿದೆ. ಈ ಮೂಲಕ 51 ಸಾವಿರ ರೂಪಾಯಿಗಳತ್ತ ದಾಪುಗಾಲು ಇಟ್ಟಿದೆ. ಇನ್ನು ಮುಂದೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಒಂದು ಕಡೆ ಅಡಿಕೆ ಬೆಲೆ ಏರಿಕೆಯಾಗುತ್ತಿದೆ‌ ಎಂದು ಖುಷಿ ಪಡುವ ರೈತನಿಗೆ, ಮತ್ತೊಂದು ಸಂಕಷ್ಟ ಕೂಡ ಎದುರಾಗಿದೆ. ಮಳೆ ಇಲ್ಲದೆ ಅಡಿಕೆ ಗಿಡಗಳು ಒಣಗಿ ಹೋಗುತ್ತಿವೆ. ದಾವಣಗೆರೆ, ಚಿತ್ರದುರ್ಗ ಭಾಗದ ರೈತರಲ್ಲಿ ಈ ಚಿಂತೆ ಮನೆ ಮಾಡಿದೆ. ಭದ್ರಾ ನಾಲೆಯ ನೀರಾದರೂ ಸಿಕ್ಕರೆ ಇರುವ ಅಡಿಕೆ ಬೆಲೆಯನ್ನು ಉಳಿಸಿಕೊಳ್ಳಬಹುದು.

ಚನ್ನಗಿರಿಯ ಕೆಲವು ಭಾಗಗಳಿಗೆ ಮಾತ್ರ ಭದ್ರಾ ನಾಲೆಯ ನೀರು ಸಿಗುತ್ತಿದೆ. ಉಳಿದ ಭಾಗದಲ್ಲಿ ಬೋರ್ ವೆಲ್ ನೀರನ್ನೇ ನಂಬಿಕೊಂಡಿದ್ದಾರೆ. ಅಂತರ್ಜಲ ಕುಸಿತದಿಂದಾಗಿ ಬೋರ್ವೆಲ್ ನೀರು ಕೂಡ ಕುಸಿತವಾಗಿದೆ. ಬಿಸಿಲಿನ ಧಗೆ ಹೆಚ್ಚಾಗಿರುವ ಕಾರಣ ಈಗ ಎಷ್ಟೇ ಲಾಭ ಬಂದರು ಅದರಿಂದ ಗಿಡಗಳನ್ನು ಉಳಿಸಿಕೊಳ್ಳುವುದಕ್ಕೇನೆ ಖರ್ಚು ಮಾಡಲಾಗುತ್ತಿದೆ. ಚನ್ನಗಿರಿಯಲ್ಲಿ ವಿಶ್ವದಲ್ಲಿಯೇ ಖ್ಯಾತಿ ಪಡೆದಿರುವ ಸೂಳೇಕೆರೆ ಇದೆ. ಆದರೂ ಅಲ್ಲಿನ ನೀರು ಸಿಗುತ್ತಿಲ್ಲ ಎಂದು ಸ್ಥಳೀಯ ರೈತರು ಬೇಸರ ಹೊರ ಹಾಕುತ್ತಿದ್ದಾರೆ. ಚನ್ನಗಿರಿ ವಹಿವಾಟಿನಲ್ಲಿ ಪ್ರತಿ ಕ್ವಿಂಟಾಲ್ ಉತ್ತನ ರಾಶಿ ಅಡಿಕೆ ಕನಿಷ್ಠ 48,400 ರೂಪಾಯಿಗಳಿದ್ದು, ಗರಿಷ್ಠ ಬೆಲೆ 49,699 ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!