ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ಸಂತಸ

suddionenews
1 Min Read

ಬೆಂಗಳೂರು :  ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲ ಸಂಪನ್ಮೂಲ ಸಚಿವ
ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಬಜೆಟ್ ನಲ್ಲಿ ಅನುದಾನ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಬರಪೀಡಿತ ಮತ್ತು ಬರ ಸಂಭವನೀಯ ಪ್ರದೇಶದ ರೈತರ ಬಾಳಿನಲ್ಲಿ ಬೆಳಕು ಮೂಡಿಸುವ ಸ್ವತಂತ್ರ ಭಾರತದ ಮೊದಲ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜಯನ್ನಾಗಿ ಘೋಷಣೆ ಮಾಡಿರುವ ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಜನಪರ ಸರ್ಕಾರದ ನಿಲುವನ್ನು ನಾನು ಅತ್ಯಂತ ಹರ್ಷದಿಂದ ಸ್ವಾಗತಿಸುತ್ತೇನೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರಿಗೆ ಕೇಂದ್ರ ಜಲ ಸಂಪನ್ಮೂಲ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ರವರಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಶ್ರೀ ಪ್ರಹ್ಲಾದ ಜೋಶಿ, ಕು|| ಶೋಭಾ ಕರಂದ್ಲಾಜೆ, ಶ್ರೀ ನಾರಾಯಣಸ್ವಾಮಿ, ಶ್ರೀ ಭಗವಂತ ಖೂಬಾ, ಶ್ರೀ ರಾಜೀವ್ ಚಂದ್ರಶೇಖರ್  ಹಾಗೂ ಕೇಂದ್ರ ಸಂಪುಟದ ಎಲ್ಲಾ ಸದಸ್ಯರಿಗೆ ಹಾಗೂ ರಾಜ್ಯದ ಎಲ್ಲ ಸಂಸದರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಕೇಂದ್ರದ ಈ ಕ್ರಮದಿಂದ ಕರ್ನಾಟಕದ ಮಹತ್ವದ ನೀರಾವರಿ ಯೋಜನೆ ಹಣಕಾಸಿನ ನೇರವಿನಿಂದ ರೈತರ ಬಾಳನ್ನು ಹಸನುಗೊಳಿಸಲಿದೆ. ಇಂತಹ ಐತಿಹಾಸಿಕ ಕ್ರಮದಿಂದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರವು ಕರ್ನಾಟಕದ ಜನರ ಭಾವನೆಗಳನ್ನು ಗುರುತಿಸಿ, ಗೌರವಿಸಿ ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾದ ಮಹತ್ವದ ಹೆಜ್ಜೆಯನ್ನು ಇರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *