ಹೆಲಿಕಾಪ್ಟರ್ ಅಪಘಾತದಲ್ಲಿ ಓರ್ವ ಪೈಲಟ್ ಸೇರಿದಂತೆ 6 ಮಂದಿ ಸಾವು

ಕೇದಾರನಾಥ, (ಅ.18):  ಇಂದು ಉತ್ತರಾಖಂಡದ ಕೇದಾರನಾಥ ಬಳಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಪೈಲಟ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ಗರುಡ್ ಚಟ್ಟಿ ಬಳಿ ಪತನಗೊಂಡಿದ್ದು, ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಮತ್ತು
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ದೆಹಲಿ ಮೂಲದ ಆರ್ಯನ್ ಏವಿಯೇಷನ್‌ಗೆ ಸೇರಿದ ಬೆಲ್ 407 ಹೆಲಿಕಾಪ್ಟರ್ ವಿಟಿ-ಆರ್‌ಪಿಎನ್ ಕೇದಾರನಾಥದಿಂದ ಗುಪ್ತಕಾಶಿಗೆ ಹೋಗುವ ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ. ಕೇದಾರನಾಥದಿಂದ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಒಟ್ಟು ಏಳು ಮಂದಿ ಇದ್ದರು.

ಹವಾಮಾನ ವೈಪರೀತ್ಯದಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗರುಡ ಚಟ್ಟಿ ಬಳಿ ಆರ್ಯನ್ ಏವಿಯೇಷನ್ ​​ಬೆಲ್-407 ಹೆಲಿಕಾಪ್ಟರ್ ವಿಟಿಗೆ ಬೆಂಕಿ ತಗುಲುವ ಮುನ್ನ ದೊಡ್ಡ ಶಬ್ದ ಕೇಳಿಸಿತು ಎಂದು ಏವಿಯೇಷನ್ ​​ರೆಗ್ಯುಲೇಟರ್ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *