Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳು ಬರಪೀಡಿತ ಎಂದು ಘೋಷಣೆ

Facebook
Twitter
Telegram
WhatsApp

 

 

ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ರೈತ ತಲೆ‌ಮೇಲೆ ಕೈಹೊತ್ತು ಕುಳಿತಿದ್ದಾನೆ. ರಾಜ್ಯದಲ್ಲಿ ಸಾಕಷ್ಟು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಇದೀಗ 161 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶಾನುಸಾರ ಬರಪೀಡಿತ ಪ್ರದೇಶದ ಘೋಷಣೆ ಮಾಡಲಾಗಿದೆ.

2023-24ನೇ ಸಾಲಿನಲ್ಲಿ 161 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಕಂಡು ಬಂದಿದೆ. ಈ ಪೈಕಿ 161 ತಾಲೂಕುಗಳು ಬರಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಮಾನ್ಯ ಬರಪೀಡಿತ ತಾಲೂಕು ಎಂದು ಆದೇಶದಲ್ಲಿ ಘೋಷಣೆ ಮಾಡಲಾಗಿದೆ.

ಇದು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು, ಮುಂದಿನ 6 ತಿಂಗಳುಗಳ ಕಾಲ ಅಥವಾ ಮುಂದಿನ ಆದೇಶ ಬರುವ ತನಕ ಘೋಷಣೆಯ ಆದೇಶ ಚಾಲ್ತಿಯಲ್ಲಿರುತ್ತದೆ. ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿರುತ್ತಾರೆ. ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರನ್ವಯ ಕಡ್ಡಾಯ ಮತ್ತು ತತ್ಪರಿಣಾಮ ಸೂಚಕಗಳ ನಿರಂತರ ಮೇಲ್ವಿಚಾರಣೆಯ ಆಧಾರದ ಮೇಲೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ದಿನಾಂಕ 1/6/2023 ರಿಂದ 19/8/2023 ಅವಧಿಯ ವರದಿಯಂತೆ ರಾಜ್ಯದಲ್ಲಿ 487 ಮಿ. ಮೀ. ಮಳೆಯಾಗಿದ್ದು, ವಾಡಿಕೆ ಮಳೆ (635 ಮಿ. ಮೀ.)ಗೆ ಹೋಲಿಸಿದಾಗ ಶೇ.23ರಷ್ಟು ಮಳೆಕೊರತೆ ಕಂಡು ಬಂದಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!