ನವದೆಹಲಿ: 1ನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕಿಯೊಬ್ಬಳು ಬೆಲೆ ಏರಿಕೆಯಿಂದ ತಾನು ಎದುರಿಸುತ್ತಿರುವ ಕಷ್ಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ.
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಛಿಬ್ರಮೌ ಪಟ್ಟಣದ ಬಾಲಕಿ ಕೃತಿ ದುಬೆ ತನ್ನ ಪತ್ರದಲ್ಲಿ ಹೀಗೆ ಬರೆದಿದ್ದಾಳೆ, “ನನ್ನ ಹೆಸರು ಕೃತಿ ದುಬೆ. ನಾನು 1 ನೇ ತರಗತಿಯಲ್ಲಿ ಓದುತ್ತಿದ್ದೇನೆ. ಮೋದಿಜಿ, ನೀವು ಅಪಾರ ಬೆಲೆ ಏರಿಕೆ ಮಾಡಿದ್ದೀರಿ. ನನ್ನ ಪೆನ್ಸಿಲ್ ಮತ್ತು ರಬ್ಬರ್ (ಎರೇಸರ್) ದುಬಾರಿಯಾಗಿದೆ ಮತ್ತು ಮ್ಯಾಗಿಯ ಬೆಲೆಯೂ ಹೆಚ್ಚಾಗಿದೆ. ಈಗ ನನ್ನ ತಾಯಿ ಪೆನ್ಸಿಲ್ ಕೇಳಿದ್ದಕ್ಕಾಗಿ ನನ್ನನ್ನು ಹೊಡೆಯುತ್ತಾರೆ. ನಾನೇನು ಮಾಡಲಿ? ಇತರ ಮಕ್ಕಳು ನನ್ನ ಪೆನ್ಸಿಲ್ ಅನ್ನು ಕದಿಯುತ್ತಾರೆ.” ಎಂದು ಅಳಲು ತೋಡಿಕೊಂಡಿದ್ದಾಳೆ.
ಹಿಂದಿಯಲ್ಲಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಕೀಲರಾಗಿರುವ ಆಕೆಯ ತಂದೆ ವಿಶಾಲ್ ದುಬೆ, “ಇದು ನನ್ನ ಮಗಳ `ಮನ್ ಕಿ ಬಾತ್`. ಇತ್ತೀಚೆಗೆ ಶಾಲೆಯಲ್ಲಿ ಪೆನ್ಸಿಲ್ ಕಳೆದುಕೊಂಡಾಗ ತಾಯಿ ಗದರಿಸಿದಾಗ ಅವಳು ಸಿಟ್ಟಾದಳು ಎಂದಿದ್ದಾರೆ.
ಈ ಪುಟ್ಟ ಹುಡುಗಿಯ ಪತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಕೊಂಡಿದ್ದೇನೆ ಎಂದು ಛಿಬ್ರಾಮೌ ಎಸ್ಡಿಎಂ ಅಶೋಕ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. “ನಾನು ಮಗುವಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಸಿದ್ಧನಿದ್ದೇನೆ ಮತ್ತು ಆಕೆಯ ಪತ್ರವು ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…