Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ 60 ಕೋಟಿ ಕಾರಣ : ಡೆತ್ ನೋಟ್ ನಲ್ಲಿ ಇದ್ದಿದ್ದು ಏನು..?

Facebook
Twitter
Telegram
WhatsApp

ಬೆಂಗಳೂರು: ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಹಲವು ಉದ್ಯಮಗಳನ್ನು ಮಾಡುತ್ತಿದ್ದ ಸೌಂದರ್ಯ ಜಗದೀಶ್ ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಅವರ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿದ್ದು, ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಸೌಂದರ್ಯ ಜಗದೀಶ್ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆ ಡೆತ್ ನೋಟ್ ನಲ್ಲಿ ನಷ್ಟದ ವಿಚಾರ ಪತ್ತೆಯಾಗಿದೆ. ಈ ಡೆತ್ ನೋಟ್ ಆಧರಿಸಿ ಪೊಲೀಸರು ಕೂಡ ತನಿಖೆ ಕೈಗೊಂಡಿದ್ದರು. ಇದೀಗ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ನಲ್ಲಿ ಮೂವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸೌಂದರ್ಯ ಜಗದೀಶ್ ತನ್ನ ಬಿಸಿನೆಸ್ ಲಾಸ್ ಬಗ್ಗೆ ಆ ಡೆತ್ ನೋಟ್ ನಲ್ಲಿ ನಮೂದಿಸಿದ್ದರು.

ಜೆಟ್ ಲ್ಯಾಗ್ ಪಬ್ ಉದ್ಯಮದ ಜೊತೆಗೆ ಸೌಂದರ್ಯ ಕನ್ಸ್ಟ್ರಕ್ಷನ್ ಕಂಪನಿಯನ್ನು ಸೌಂದರ್ಯ ಜಗದೀಶ್ ಪಾಟ್ನರ್ ಶಿಪ್ ನಲ್ಲಿ ನಡೆಸುತ್ತಿದ್ದರು. ಆದರೆ ಬಿಸಿನೆಸ್ ನಷ್ಟವಾಗುವುದಕ್ಕೆ ಪಾಲುದಾರರೇ ಕಾರಣ ಎಂಬುದನ್ನು ಸೌಂದರ್ಯ ಜಗದೀಶ್ ಅದರಲ್ಲಿ ತಿಳಿಸಿದ್ದಾರೆ. ಇದರಿಂದಾಗಿ 60 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದನ್ನು ಬರೆದಿದ್ದರು ಎನ್ನಲಾಗಿದೆ. ಈ ಮೂಲಕ ಸೌಂದರ್ಯ ಜಗದೀಶ್ ಸಾವಿಗೆ ಈ ಸಾಲದ ಹೊರೆಯು ಕಾರಣ ಎನ್ನಲಾಗಿದೆ.

ಇನ್ನು ಈ ಕಂಪನಿಯ ನಷ್ಟದ ವಿಚಾರಕ್ಕೆ ಪಾಲುದಾರರ ವಿರುದ್ದ ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಜಗದೀಶ್ ಬಿಸಿನೆಸ್ ಪಾಟ್ನರ್ ಆಗಿದ್ದ ಸುರೇಶ್, ಹೊಂಬಣ್ಣ, ಸುದೀಂದ್ರ ಎಂಬುವವರ ಮೇಲೆ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ

ಸುದ್ದಿಒನ್, ಚಿತ್ರದುರ್ಗ: ಜು.07 :  ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ,  ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು. ಜುಲೈ 10 ಕೊನೆ ದಿನಾಂಕ ಆಗಿದೆ. ಎಸ್.ಎಸ್.ಎಲ್.ಸಿ ಮತ್ತು

ಔಷಧಿ ಅಂಗಡಿಗಳ ಮುಂದೆ ಕ್ಯೂ ನಿಲ್ಲುವುದನ್ನು ತಪ್ಪಿಸಿ, ಗಿಡಮರ ಬೆಳಸಿ ಆರೋಗ್ಯ ಕಾಪಾಡಿಕೊಳ್ಳಿ : ಸಿದ್ದರಾಜು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 07 :  ನಗರದ ಬ್ಯಾಂಕ್ ಕಾಲೋನಿಯ ಶ್ರೀ ಮುರುಘ ರಾಜೇಂದ್ರ ಆಟದ ಮೈದಾನದಲ್ಲಿ ಟಾರ್ಗೆಟ್

ಜುಲೈ 20 ರಂದು ಗಿನ್ನಿಸ್ ದಾಖಲೆ ರೀತಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಆಚರಣೆ : ಎಸ್.ರವಿಕುಮಾರ್

ಸುದ್ದಿಒನ್, ಚಿತ್ರದುರ್ಗ, ಜುಲೈ. 07 :ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು. ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಭಾನುವಾರ ನಡೆದ ದೀಕ್ಷಾ ರಜತ್ ಮಹೋತ್ಸವದ ಪೂರ್ವಭಾವಿ

error: Content is protected !!