Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆ ಮನೆಯಲ್ಲಿ ಡಿಜೆ, ಪಟಾಕಿ ಸದ್ದಿಗೆ 63 ಕೋಳಿಗಳ ಸಾವು : ಮಾಲೀಕನಿಂದ ದೂರು ದಾಖಲು..!

Facebook
Twitter
Telegram
WhatsApp

ಒಡಿಶಾ : ಮದುವೆ ಅಂದ್ರೇನೆ ಸಂಭ್ರಮ.. ಆ ಸಂಭ್ರಮವಿದ್ದಾಗ ಹಾಡು, ಡ್ಯಾನ್ಸ್, ಪಟಾಕಿ ಹೊಡೆಯೋ ಖುಷಿ ಈ ಎಲ್ಲವೂ ಇದ್ದೆ ಇರುತ್ತೆ. ಆದ್ರೆ ಇಂಥ ಸಂಭ್ರಮ ಯಾವುದೋ ಪ್ರಾಣಿಗಳ ಪ್ರಾಣಕ್ಕೆ ತುತ್ತಾಗುತ್ತೆ ಅಂದ್ರೆ..? ಹೌದು ಅಂಥದ್ದೊಂದು ಘಟನೆ ಓಡಿಶಾದಲ್ಲಿ ನಡೆದಿದೆ.

ಬಾಲಸೋರ್ ಜಿಲ್ಲೆಯ ಕಂದರಗಡಿ ಎಂಬ ಗ್ರಾಮದಲ್ಲಿ ಇಂಥದ್ದೊಂದು ಕೇಸ್ ರಿಜಿಸ್ಟರ್ ಆಗಿದೆ. ಇದೇ ಗ್ರಾಮದಲ್ಲಿ ಮದುವೆ ಕಾರ್ಯಕ್ರಮವೊಂದು ನಡೆದಿದೆ. ಆ ಮದುವೆಯಲ್ಲಿ ಜೋರು ಡಿಜೆ ಸೌಂಡ್ ಹಾಕಿದ್ದಾರೆ. ಪಟಾಕಿ ಸಿಡಿಸಿ ಜೋರು ಶಬ್ದ ಮಾಡಿದ್ದಾರೆ.

ಇದೇ ಗ್ರಾಮದಲ್ಲಿ ರಂಜಿತ್ ಫರಿದಾ ಎಂಬ ವ್ಯಕ್ತಿ ದೊಡ್ಡ ಕೋಳಿ ಫಾರಂ ಇಟ್ಟುಕೊಂಡಿದ್ದಾರೆ. ಈ ಶಬ್ದಕ್ಕೆ ಕೊಳಿಗಳು ವಿಚಿತ್ರವಾಗಿ ವರ್ತಿಸಲು ಶುರಿ ಮಾಡಿವೆ. ಇದನ್ನು ಗಮನಿಸಿದ್ದ ರಂಜಿತ್ ಮದುವೆ ಸಮಾರಂಭಕ್ಕೆ ಹೋಗಿ, ಶಬ್ಧ ಕಡಿಮೆ ಮಾಡಲು ತಿಳಿಸಿದ್ದಾರೆ. ಆದರೂ ಅವರು ಶಬ್ಧ ಕಡಿಮೆ ಮಾಡಿಲ್ಲ. ಈ ಶಬ್ದಕ್ಕೆ, ಪಟಾಕಿ ವಾಸನೆಗೆ 63 ಕೋಳಿಗಳು ಸಾವನ್ನಪ್ಪಿವೆ ಎಂದು ರಂಜಿತ್ ಫರಿದಾ ಮದುವೆ ಮನೆಯವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಕೋಳಿಗಳ ಸಾವಿಗೆ ಪರಿಹಾರ ನೀಡುವಂತೆ ಕೇಳಿಕೊಂಡಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!