Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ.ಎಸ್. ಹಳ್ಳಿಯಲ್ಲಿ ಲಿಂಗೈಕ್ಯ ಬಸವಲಿಂಗ ಸ್ವಾಮಿಗಳ 64 ನೇ ಸಂಸ್ಮರಣೆ ಕಾರ್ಯಕ್ರಮ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಸಾಧು ಸಂತರು ಮತ್ತು ದಾರ್ಶನಿಕರ ಸಂಸ್ಮರಣೆ ಅಥವಾ ಪುಣ್ಯರಾಧನೆ ಎಂದರೆ ಅವರು ಅನುಭಾವಿಸಿ ಬೋಧಿಸಿದ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆಯುವುದೆ ಹೊರತು ಜಾತ್ರೆ ಜಂಗುಳಿ ಉತ್ಸವಗಳಲ್ಲ ಎಂದು ನಿವೃತ್ತ ಪ್ರಾಂಶುಪಾಲರು ಹಾಗೂ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಹೇಳಿದರು.

ದೊಡ್ಡಸಿದ್ದವ್ವನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಲಿಂಗೈಕ್ಯ ಬಸವಲಿಂಗ ಸ್ವಾಮಿಗಳ 64 ನೇ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ನಡೆ-ನುಡಿ ಸಿದ್ದಾಂತ ಕುರಿತು ಉಪನ್ಯಾಸ ನೀಡಿದರು.

ತತ್ವ ನೀತಿಗಳಿಲ್ಲದ ಆಚರಣೆಗಳು, ನಡೆ-ನುಡಿ ಸಾಮ್ಯವಿಲ್ಲದ ಪ್ರವಚನಗಳು ಅಲ್ಲಮಪ್ರಭುಗಳು ಹೇಳಿದಂತೆ ತೋರುಂಬ ಲಾಭಗಳಾಗುತ್ತವೆಯೇ ಹೊರತು ಸಾಮರಸ್ಯ ಸಮಾಜ ಕಟ್ಟುವ ಪ್ರಯತ್ನಗಳಾಗುವುದಿಲ್ಲ ಎಂದರು.

ನಮ್ಮ ಮಾತುಗಳು ವೇದಿಕೆಯಲ್ಲಿ ಬೋಧನೆಗಳಿಗಷ್ಟೆ ಸೀಮಿತವಾದಾಗ ಕೇಳುಗರು ಅವುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ತೆರೆಮರೆಯಲ್ಲಿ ಅಪಹಾಸ್ಯಕ್ಕೀಡು ಮಾಡುತ್ತಾರೆ. ಅದಕ್ಕಾಗಿ ಶಿವಯೋಗದಂತಹ ಆಧ್ಯಾತ್ಮಿಕ ಮಾರ್ಗಗಳನ್ನು ಬೋಧಿಸುವವರು ಕ್ರಾಂತಿಕಾರಿ ಬಸವಣ್ಣನವರು ಹೇಳಿದ ನಡೆಯಲ್ಲಿ ಎಚ್ಚೆತ್ತುಕೊಂಡು ನುಡಿಯಲ್ಲಿ ತಪ್ಪಿದರೆ ಹಿಡಿದಿರ್ಪ ಲಿಂಗ ಘಟಸರ್ಪ ಎನ್ನುವ ಎಚ್ಚರಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಕೇಳುಗರೂ ಕೂಡ ಹೇಳುವವರ ಮಾತುಗಳನ್ನು ಅವರ ನಿಜ ನಡೆಯ ಓರೆಗೆ ಹಚ್ಚಿ ನೋಡುವ ಪರಿಪಾಠ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ವೀರಶೈವ ಲಿಂಗಾಯಿತ ಸಮಾಜದ ಮುಖಂಡ ಕೆಇಬಿ. ಷಣ್ಮುಖಪ್ಪ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಸಮಾಜಕ್ಕೆ ಮಾರ್ಗ ತೋರಿಸುವ ಧಾರ್ಮಿಕ ಮುಖಂಡರ ನಡೆನುಡಿಯಲ್ಲಿ ಇಬ್ಬಂದಿತನವಿರಬಾರದು. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದ್ವಂದ್ವಗಳನ್ನು ಮೀರಿ ಸಮಾಜದ ಬೆಳವಣಿಗೆಗೆ ಬೆಳಕು ತೋರಿಸುವಂತಿರಬೇಕೆಂದರು.

ಶಿಕ್ಷಕ ನಾಗಭೂಷಣ್, ನಿವೃತ್ತ ಇಂಜಿನಿಯರ್ ಶಿವಕುಮಾರ್, ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜಕಟ್ಟಿ ವೇದಿಕೆಯಲ್ಲಿದ್ದರು.
ಶರಣೆ ನಾಗಲಾಂಭಿಕ ವಚನ ಗಾಯನ ಹಾಡಿದರು.
ಜಾಗತಿಕ ಲಿಂಗಾಯಿತ ಮಹಾಸಭಾದ ಸಂಚಾಲಕ ಧನಂಜಯ ಸ್ವಾಗತಿಸಿದರು. ನಿವೃತ್ತ ಉಪನ್ಯಾಸಕ ನಂದೀಶ್ ವಂದಿಸಿದರು. ಉಪನ್ಯಾಸಕಿ ರಶ್ಮಿ ನಿರೂಪಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!