HSRP ಪ್ಲೇಟ್ ಅಳವಡಿಸಲು 6ನೇ ಬಾರಿ ಗಡುವು ವಿಸ್ತರಣೆ : ಜ.31 ಕೊನೆಯ ದಿನಾಂಕ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸುವುದಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಇದೀಗ ಆರನೇ ಬಾರಿಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿದೆ. ವಾಹನ ಮಾಲೀಕರು ಈ ಸಲ ಆದರೂ ನಂಬರ್ ಪ್ಲೇಟ್ ಅಳವಡಿಸಲು ಸೂಚನೆ ನೀಡಿದ್ದಾರೆ. ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದ್ದು, ಈ ತಿಂಗಳ ಕೊನೆ ಅಂದ್ರೆ ಜನವರಿ 31ರವರೆಗೂ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳ ಕೊನೆಯೊಳಗೆ ಹಳೆಯ ಗಾಡಿಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿದೆ.

2019ಕ್ಕೂ ಮೊದಲು ಖರೀದಿ‌ ಮಾಡಿರುವ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿದೆ. ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1989 ಸೆಕ್ಷನ್ 50 ಹಾಗೂ 51ರ ಅನ್ವಯ ಎಲ್ಲಾ ವಾಹನಗಳಿಗೂ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್ ಗಳನ್ನು ಅಳವಡಿಸಬೇಕಿದೆ. HSRP ಎಂದರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಎಂದರ್ಥ.

ಈ ಹೈ ಸೆಕ್ಯುರಿಟಿ ಪ್ಲೇಟ್ ಹಾಕಿಸದೆ ಹೋದರೆ ಆ ಗಾಡಿಯನ್ನು ಮಾರುವುದಕ್ಕೆ ಸಾಧ್ಯವಾಗುವುದಿಲ್ಲ. ಮಾಲೀಕತ್ವದ ಬದಲಾವಣೆಯಾಗಲಿ, ವಿಳಾಸ ಬದಲಾವಣೆಯಾಗಲಿ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಯಾವುದೇ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ರಸ್ತೆಯಲ್ಲಿ ಅಧಿಕೃತವಾಗಿಲ್ಲದ ವಾಹನಗಳು ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಹೀಗಾಗಿ ಈ ತಿಂಗಳು ಮುಗಿಯುವುದರೊಳಗೆ ಯಾರೆಲ್ಲಾ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ, ಆದಷ್ಟು ಬೇಗ ಹೊಸ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ‌.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

56 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago