Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಗೆ ಆತಿಥ್ಯ ನೀಡಿದ್ದ 7 ಅಧಿಕಾರಿಗಳು ಅಮಾನತು : ಸಚಿವ ಪರಮೇಶ್ವರ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದ್ರೆ ನಿನ್ನೆ ಒಂದು ಫೋಟೋ ವೈರಲ್ ಆಗಿತ್ತು. ಜೈಲಿನಲ್ಲಿಯೇ ಟೀ ಕುಡಿಯುತ್ತಾ, ಸಿಗರೇಟು ಸೇದುತ್ತಾ ಅಯಾಗಿದ್ದರು. ಜೊತೆಗೆ ರೌಡಿಶೀಟರ್ ಬಳಿ ವಿಡಿಯೋ ಕಾಲ್ ನಲ್ಲಿ ಕೂಡ ಮಾತನಾಡಿದ್ದಾರೆ. ಈ ವಿಡಿಯೋ ಕೂಡ ವೈರಲ್ ಆಗಿದ್ದು, ದರ್ಶನ್ ಅವರಿಗೆ ಫೋನ್ ವ್ಯವಸ್ಥೆ ಕೂಡ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈ ಫೋಟೋ ವೈರಲ್ ಆದ ಬೆನ್ನಲ್ಲೇ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಸಂಬಂಧ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ದರ್ಶನ್ ಅವರಿಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದಕ್ಕೆ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ವಿಚಾರ ನಿನ್ನೆ‌ ಗೊತ್ತಾಯ್ತು. ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಜೈಲಿನ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಹಿರಿಯ ಅಧಿಕಾರಿಗಳ ಬಗ್ಗೆ ಇನ್ನು ತನಿಖೆ ಮಾಡಬೇಕಿದೆ. ರಾತ್ರಿ 1 ಗಂಟೆಯವರೆಗೂ ಜೈಲಿನಲ್ಲಿ ತನಿಖೆ ಮಾಡಲಾಗಿದೆ. ಜೈಲಿನ ಡಿಜಿಯವರ ಜೊತೆಗೆ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿ ತನಿಖೆ ನಡೆಸಿದ್ದೇವೆ. ದರ್ಶನ್ ಬಹಳ ಆರಾಮವಾಗಿ ಇದ್ದಾರೆ ಎಂದು ಫೋಟೋ ವೈರಲ್ ಆಗಿದೆ. ಹೀಗಾಗಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಶರಣವಸವ ಅಮಿನಾಗಾಡ್, ಪ್ರಭು ಎಸ್ ಖಂಡೇಲ್ ವಾಲ್, ಅಸಿಸ್ಟೆಂಟ್ ಜೈಲರ್ ಗಳಾದ ಎಲ್.ಎಸ್.ತಿಪ್ಪೇಸ್ವಾಮಿ ಹಾಗೂ ಶ್ರೀಕಾಂತ್ ತಳವಾರು, ಹೆಡ್ ವಾರ್ಡ್ ಗಳಾದ ವೆಂಕಪ್ಪ ಕೊರ್ತಿ ಹಾಗೂ ಸಂಪತ್ ಕುಮಾರ್ ಕಡಾಪಟ್ಟಿ, ವಾರ್ಡನ್ ಬಸಪ್ಪ ತೇಲಿಯನ್ನು ಅಮಾನತು ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!