Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ 71.41 ಲಕ್ಷ ಹಣ ಸಂಗ್ರಹ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್,ಚಿತ್ರದುರ್ಗ, ಮೇ. 24 :  ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು ಶುಕ್ರವಾರ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್ ರೇಹಾನ್ ಪಾಷ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಾರ್ಯನಿರ್ವಾಣಧಿಕಾರಿ ಎಚ್. ಗಂಗಾಧರಪ್ಪ. ಮತ್ತು ಬ್ಯಾಂಕ್ ಅಧಿಕಾರಿಗಳ ಸಹಯೋಗದಲ್ಲಿ ನಡೆಯಿತು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಣಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ ಜಿಲ್ಲಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಸಿದ್ಧಪಡಿಸಿದ್ದು ಈ ವರ್ಷ ವಾರ್ಷಿಕ ಜಾತ್ರೆ ಮಾರ್ಚ್ 26 ರಂದು ನಡೆಯಿತು. ಲೋಕಸಭಾ ಚುನಾವಣೆ ಇದ್ದುದರಿಂದ ಒಂದು ತಿಂಗಳು ಲೇಟಾಗಿ ಹುಂಡಿ ಎಣಿಕೆ ಮಾಡಲಾಗಿದೆ. ಕಳೆದ ವರ್ಷ 72 ಲಕ್ಷ ಆಗಿತ್ತು ಈ ವರ್ಷವೂ ಸಹ 65 ರಿಂದ 70 ಲಕ್ಷ ನಿರೀಕ್ಷೆಯಲ್ಲಿ ಇದ್ದೇವೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಈ ಹಣವನ್ನು ಬಳಸಲಾಗುವುದು ಎಂದರು.

ಮೊದಲು ಹೂರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ರೇಹಾನ್ ಪಾಷ, ಹಾಗೂ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ ನೇತೃತ್ವದಲ್ಲಿ ಕಾಣಿಕೆ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಹೊರಮಠದಲ್ಲಿ  ₹ 19,53,575 ಲಕ್ಷ , ಒಳಮಠದಲ್ಲಿ ₹  51,87,750 ಲಕ್ಷ  ಸಂಗ್ರಹವಾಗಿ ಒಟ್ಟಾರೆಯಾಗಿ ನಾಲ್ಕು ತಿಂಗಳ ಅವಧಿಯಲ್ಲಿ ₹   71,41,325 ಲಕ್ಷ ಸಂಗ್ರಹವಾಗಿದೆ.

ಹಣವನ್ನು ದೇವಾಲಯದ ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು. ಹೊರಮಠ ಮತ್ತು ಒಳಮಠಗಳ ಹುಂಡಿಯಲ್ಲಿ ಹಲವು ಬೆಳ್ಳಿ ನಾಣ್ಯಗಳು ಬೆಳ್ಳಿ ತೊಟ್ಟಿಲುಗಳು ಬೆಳ್ಳಿ ಆಭರಣಗಳು ಕಂಡು ಬಂದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!