Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರಲಾಲ್ ನೆಹರೂ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹ ಉದ್ಘಾಟನೆ: ಸಿ.ಎಂ ಸಿದ್ದರಾಮಯ್ಯ

---Advertisement---

ಬೆಂಗಳೂರು‌. ಅ. 24:  ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷ ಕತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ರಾಜ್ಯ ಮಟ್ಟದ 72 ನೇ ಸಪ್ತಾಹದ ಉದ್ಘಾಟನೆಯನ್ನು ನೆಹರೂ ಜಯಂತಿಯಂದೇ ದಿನಾಂಕ ನವೆಂಬರ್ 14ರಂದು ಮಾಡಲು ನಿರ್ಧರಿಸಿದ್ದೇವೆ.

ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು ಇದರ ಉದ್ಘಾಟನೆಯನ್ನು ನಾನು ನೆರವೇರಿಸಲಿದ್ದೇನೆ. ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದ್ದು ಸಮಾರೋಪ ಸಮಾರಂಭ ನವೆಂಬರ್ 20 ರಂದು ಚಾಮರಾಜನಗರದಲ್ಲಿ ನಡೆಯಲಿದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದರು.

“ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾ ಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೇ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸಹಕಾರ ರಾಜ್ಯದ ವ್ಯಾಪ್ತಿಗೆ ಬರುವ ವಿಚಾರ. ಕೇಂದ್ರದ ವ್ಯಾಪ್ತಿಗೆ ಬರುವ ವಿಚಾರ ಅಲ್ಲ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now