Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಸಗಿ ಕಂಪನಿಗಳಲ್ಲಿ ಶೇ.75ರಷ್ಟು ಉದ್ಯೋಗ ಕನ್ನಡಿಗರಿಗೆ ಮೀಸಲು : ರಾಜ್ಯ ಸರ್ಕಾರದ ಮಹತ್ವದ ಆದೇಶ

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಂತ ಹೆಚ್ಚು ಬೇರೆ ರಾಜ್ಯದವರೇ ಉದ್ಯೋಗಿಗಳಾಗಿದ್ದಾರೆ. ಸ್ಥಳೀಯರಿಗೆ ಕೆಲಸ ಸಿಗುವುದೇ ಕಷ್ಟ. ಇದೀಗ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳು ಶೇಕಡಾ 75 ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಿದೆ.

ಸಂಸ್ಥೆಗಳು ನಿರ್ವಹಣಾ ಸ್ಥಾನಗಳಲ್ಲಿ ಶೇಕಡಾ 50ರಷ್ಟು ಹಾಗೂ ನಿರ್ವಹಣೇತರ ಹುದ್ದೆಗಳಲ್ಲಿ ಶೇಕಡಾ 75ರಷ್ಟು ಹುದ್ದೆಗಳನ್ನು ಸ್ಥಳೀಯವಾಗಿ ಮೀಸಲಿಡಬೇಕೆಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಆಡಳಿತ ಕೋಟಾದಡಿ ಶೇಕಡಾ ಮೀಸಲು ಇಡಲಾಗುತ್ತದೆ. ಆಡಳಿತಾತ್ಮಕ ಕೋಟಾದಡಿ ಸೂಪರ್ ವೈಸರ್, ಮ್ಯಾನೇಜರ್, ತಾಂತ್ರಿಕ ತಂತ್ರಜ್ಞರಯ ಸೇರಿದಂತೆ ಹಲವು ಹುದ್ದೆಗಳು ಬರಲಿವೆ. ಇದು ಗುತ್ತಿಗೆ ಆಧಾರದ ಮೇಲಿನ ಕೆಲಸಗಳಿಗೂ ಅನ್ವಯವಾಗಲಿದೆ.

ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿಕೆ ಶಿವಕುನಾರ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿರುವುದೇ ಕನ್ನಡಿಗರ ಸ್ವಾಭಿಮಾನವನ್ನು ಎತಚತಿ ಹಿಡಿಯಬೇಕು ಎಂಬ ಕಾರಣಕ್ಕಾಗಿ. ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಆಗಲಿದೆ. ಮುಂದೆ ಉದ್ಯೋಗ ಸೃಷ್ಟಿಯೂ ಇರಬಹುದು. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಅಂತ ಇರಬೇಕು ಎಂಬ ತೀರ್ಮಾನ ಮಾಡಿದ್ದೇವೆ. ಈ ಸಂಬಂಧ ಬಿಲ್ ತರುತ್ತಿದ್ದೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು, ಆದ್ಯತೆ ಸಿಗಬೇಕು ಎಂದು ಕಂಡ ಕನಸು ನನಸಾಗುತ್ತಿದೆ. ಖಾಸಗಿ ವಲಯದಲ್ಲಿ ಇನ್ಮುಂದೆ ಕನ್ನಡಿಗರಿಗೆ ಉದ್ಯೋಗ ಸಿಗುವುದು ಗ್ಯಾರಂಟಿಯಾಗಿದೆ. ಈ ಆದೇಶಕ್ಕೆ ಹಲವು ಉದ್ದಿಮೆದಾರರು ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!