Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 26: ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಭಾರತೀಯರಿಗೆ ಸಮಾನತೆ, ಸ್ವತಂತ್ರತೆ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರ ಹಕ್ಕುಗಳು ದೊರೆಯುವಂತೆ  ಮಾಡಿದ್ದರಿಂದ ಭಾರತದಲ್ಲಿ ಅಸಮಾನತೆಯ ಮುಸುಕು ಕಳೆದು ಸಮಾಜದಲ್ಲಿ ಏಕತೆಯ ಬೆಳಕು ಮೂಡಿತು. ಗಣರಾಜ್ಯೋತ್ಸವದ 75ನೇ ವರ್ಷಾಚರಣೆಯ ಈ ಸಂಧರ್ಭದಲ್ಲಿ ಸಂವಿಧಾನವನ್ನು ಓದಿ  ಅರಿಯುವುಸು ಮತ್ತು ಇತರರಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ಧಾರಿಯಾಗಿದೆ ಎಂದು ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಯೋಗ ಗುರು ರವಿ ಕೆ.ಅಂಬೇಕರ್ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ ಗಣರಾಜ್ಯೋತ್ಸವದ ಅಂಗವಾಗಿ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ನಗರದ ಬ್ಯಾಂಕ್ ಕಾಲೋನಿ ಯೋಗ ಶಾಖೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಧೇಶಿಸಿ ಅವರು ಮಾತನಾಡಿರು
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ಧ ಮದಕರಿಪುರ ಶಾಲಾ ಶಿಕ್ಷಕಿ ಶ್ರೀಮತಿ ನಾಗಲತಾ ಮಾತನಾಡಿ ಗಣರಾಜ್ಯೋತ್ಸವವು ಭಾರತವನ್ನು ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಾರ್ವಭೌಮ ರಾಷ್ಟ್ರವಾಗಿ ಪರಿವರ್ತಿಸುವ ಚಲಿಸುವ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುವ ಈ ದಿನವು ಬಹಳ ಮಹತ್ವದ್ದಾಗಿದೆ ಏಕೆಂದರೆ ಇದು ಭಾರತೀಯ ಸಂವಿಧಾನವು 1950 ರಲ್ಲಿ ಜಾರಿಗೆ ಬಂದ ದಿನವನ್ನು ಸ್ಮರಿಸಲಾಗುತ್ತದೆ ಹಾಗೂ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ರವರು ನೀಡಿದ ಸವಿಂದಾನದ ಆಶಯವನ್ನು ಎತ್ತಿ ಹಿಡಿಯುವ ದಿನವಾಗಿದೆ ಎಂದು ಹೇಳಿದರು.

ಇದೇ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂತ ಜೋಸೇಫರ ಶಾಲೆಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಮಾತನಾಡಿ ಭಾರತ ದೇಶ ಸ್ವಾತಂತ್ರ್ಯಗೊಂಡ ಸಂಧರ್ಭದಲ್ಲಿ ಅಸಮಾನತೆಯಿಂದ ಅದ್ಧೋಗತಿಗೆ ತಲುಪಿದ್ಧ ಮಹಿಳೆಯರ ಸ್ಥಿತಿಗಳನ್ನು, ದೌರ್ಜನ್ಯಗಳನ್ನು, ಶೋಷಣೆಗಳನ್ನು ಕಡಿಮೆ ಮಾಡಲು ನಮ್ಮ ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನವಾಗಿ ಬದುಕಲು, ಶಿಕ್ಷಣ ಪಡೆಯಲು ಐಎಎಸ್, ಕೆಎಎಸ್ ನೌಕರಿಯನ್ನು ಪಡೆಯಲು, ಡಾಕ್ಟರ್, ಇಂಜಿನಿಯರಿಂಗ್, ಪೈಲೆಟ್, ಎಂಎಲ್‌ಎ, ಎಂಪಿ, ಡಿಸಿ, ಎಸಿ, ಆಗಲು ಡಾ. ಬಿ.ಆರ್. ಅಂಬೇಡ್ಕರ್‌ರ ಸಂವಿಧಾನ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಆದ್ಧರಿಂದ ಪ್ರತಿಯೊಬ್ಬ ಮಹಿಳೆಯೂ ಸಂವಿಧಾನವನ್ನು ಓದಿ ತಿಳಿಯಬೇಕು ಎಂದು ತಿಳಿಸಿದರು

ಹಿರಿಯ ಯೋಗ ಸಾಧಕಿ ಶ್ರೀಮತಿ ವನಜಾಕ್ಷಮ್ಮ ಸೇರಿದಂತೆ ಸದಸ್ಯರಾದ  ರೇಣುಕಮ್ಮ, ಅನಸೂಯ, ಕುಮುದ, ಶೈಲಜಾ, ಸವಿತಾ, ರೂಪಾ ಮೀನಾಕ್ಷಿ, ಸುಮಾ, ಸುಧಮ್ಮ, ಕುಮುದಾ, ಭಾಗ್ಯಾ, ನಾಗರತ್ನ, ಗೀತಾ ಇನ್ನಿತರರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜಿಸಿ, ಪುಷ್ಪಾರ್ಚನೆ ಮಾಡಿ ಸಂಭ್ರಮಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...