ಬೆಂಗಳೂರು: ರಾಜ್ಯ ಸರ್ಕಾರ ಸದ್ಯ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚನೆ ಮಾಡಿದೆ. ಈ ಆಯೋಗದಿಂದ ವರದಿ ಸರ್ಕಾರಕ್ಕೆ ತಲುಪುವುದು ಯಾವಾಗ ಎಂಬುದು ಮಾತ್ರ ಫೈನಲ್ ಆಗಿಲ್ಲ. ಸಮಿತಿ ಯಾವಾಗ ರಚಿಸಲಾಗುತ್ತೆ..? ಕಾಲಮಿತಿ ಏನು..? ಎಂಬುದರ ಸಂಬಂಧ ಪ್ರಶ್ನೆ ಕೇಳಲಾಗಿತ್ತು. ಈ ಸಂಬಂಧ ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ದಿನಾಂಕ 19/11/2022 ರಂದು ಆದೇಶ ಹೊರಡಿಸಲಾಗಿರುತ್ತದೆ. ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು ಪುನರ್ ಪರಿಶೀಲಿಸಿ ಆಯೋಗಕ್ಕೆ ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/23 ರಿಂದ 6 ತಿಂಗಳು ವಿಸ್ತರಿಸಿರುತ್ತದೆ ಎಂದು ತಿಳಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ ದಿನಾಂಕ 1/4/23ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ಮೂಲ ವೇತನ / ಮೂಲ ಪಿಂಚಣಿಯ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











