Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ, ಬೆಂಗಳೂರು ಸೇರಿ 8 ಅಧಿಕಾರಿಗಳ ಲೋಕಾ ಶಾಕ್ ; ವಶಪಡಿಸಿಕೊಂಡ ಚಿನ್ನ, ನಗದು ಡಿಟೈಲ್ ಇಲ್ಲಿದೆ

---Advertisement---

ಬೆಂಗಳೂರು; ಭ್ರಷ್ಟ ಅಧಿಕಾರಿಗಳ ಬಗ್ಗೆ ಮಾಹಿತಿ ಸಿಕ್ಕಿದ್ರೆ ಲೋಕಾಯುಕ್ತ ಪೊಲೀಸ್ ಸುಮ್ಮನೆ ಬಿಡೋರಲ್ಲ. ದಾಳಿ ನಡೆಸಿ ಅವರ ಜಾತಕವನ್ನ ಬಟಾಬಯಲು ಮಾಡ್ತಾರೆ. ಇಂದು ಕೂಡ ಅಂಥದ್ದೊಂದು ದಾಳಿ ನಡೆಸಿದ್ದಾರೆ. ರಾಜ್ಯ 8 ಅಧಿಕಾರಿಗಳಿಗೆ ದಿಢೀರನೇ ದಾಳಿ ಮಾಡಿ ಶಾಕ್ ನೀಡಿದ್ದಾರೆ. ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ. ಆ ಬಗ್ಗೆ ಕಂಪ್ಲೀಟ್ ಡಿಟೈಲ್ ಇಲ್ಲಿದೆ.

ದಾವಣಗೆರೆಯ ಫುಡ್ ಸೇಫ್ಟಿ ಅಧಿಕಾರಿ ಡಾ.ನಾಗರಾಜ್ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮನೆಯಲ್ಲಿ ಪತ್ತೆಯಾದ ಲಕ್ಷಾಂತರ ಮೌಲ್ಯದ ವಾಚ್, ಚಿನ್ನ, ಬೆಳ್ಳಿ, ನಗದನ್ನು ವಶಕ್ಕೆ ಪಡೆದಿದ್ದಾರೆ. ನಾಗರಾಜ್ ಗೆ ಸಂಬಂಧಿಸಿದಂತೆ ಐದು ಕಡೆಗಳಲ್ಲಿ ಅಕ್ರಮ ಆಸ್ತಿ ಇರುವ ಬಗ್ಗೆಯೂ ತನಿಖೆ ನಡೆಸಲಾಗಿದೆ.

 

ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಹೆಚ್.ಬಿ.ಕಲ್ಲೇಶಪ್ಪಗೆ ಸೇರಿದ ಒಟ್ಟು ಆರು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿ, 4 ಕೋಟಿ 97 ಲಕ್ಷದ 34 ಸಾವಿರ ಸ್ಥಿರ ಆಸ್ತಿ ಹಾಗೂ 1 ಕೋಟಿ 53 ಲಕ್ಷದ 18 ಸಾವಿರ ಮೌಲ್ಯದ ಚರಾಸ್ಥಿ‌ ಪತ್ತೆಯಾಗಿದೆ. ಈ ಎಲ್ಲದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಉಳಿದಂತೆ, ಬೆಂಗಳೂರಿನಲ್ಲಿ ವಾಸವಿರುವ ರೂರಲ್ ಡೆವಲಪ್ಮೆಂಟ್ ಪಂಚಾಯತ್ ರಾಜ್ ನ ಚೀಫ್ ಇಂಜಿನಿಯರ್ ನಂಜುಡಪ್ಪ, ಕಲಬುರಗಿಯ NGO ಕಾಲೋನಿ ನಿವಾಸದಲ್ಲಿರುವ ಲೋಕೋಪಯೋಗಿ ಇಲಾಖೆಯ ಚೀಫ್​ ಇಂಜಿನಿಯರ್​ ಜಗನ್ನಾಥನ ಮನೆಯಲ್ಲಿ ಅಪಾರ ಪ್ರಮಾಣದ ವಜ್ರ, ವೈಡೂರ್ಯ ಪತ್ತೆಯಾಗಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ನಾಗರಾಜ್​ಗೆ ಸೇರಿದ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ವಿಜಯಪುರದಲ್ಲಿ ಕೆಹೆಚ್​ಬಿ FDA ಶಿವಾನಂದ ಕೆಂಬಾವಿ, ತುಮಕೂರಿನಲ್ಲಿ ವೈದ್ಯ ಜಗದೀಶ್​ ಮನೆ ಮೇಲೂ ರೇಡ್​ ಮಾಡಲಾಯ್ತು, ಆಸ್ತಿ, ಪಾಸ್ತಿ ಸಂಬಂಧ ಶೋಧ ಮಾಡಲಾಯ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...