Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆಳಂದದಲ್ಲಿ 1 ವೋಟ್ ಡಿಲೀಟ್ ಗೆ 80 ರೂಪಾಯಿ : ಶಾಕಿಂಗ್ ವಿಚಾರ

---Advertisement---

ಕಲಬುರಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೋಟ್ ಚೋರಿ ಬಗ್ಗೆ ಬೃಹತ್ ಹೋರಾಟವನ್ನೇ ಮಾಡಿದ್ರು. ಅದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದರು. ಇದೀಗ ಆಳಂದ ಕ್ಷೇತ್ರದಲ್ಲಿ ಮತ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ ಈ ಸಂಬಂಧ ತನಿಖೆ ನಡೆಸುತ್ತಿದ್ದು, ಪಕ್ಕಾ ಪ್ಲ್ಯಾನ್ ಮಾಡಿ ಗೋಲ್ಮಾಲ್ ಆಗಿರುವುದು ಕಂಡು ಬಂದಿದೆ.

ವಿಚಾರಣೆಯಲ್ಲಿ ಬೆಳಕಿಗೆ ಬಂದಂತೆ, ಈ ಗ್ಯಾಂಗ್ 100ಕ್ಕೂ ಸಿಮ್ ಗಳನ್ನ ಖರೀದಿ ಮಾಡಿತ್ತಂತೆ. ಜೊತೆಗೆ ಕೋಳಿ ಫಾರಂ ಕೆಲಸಗಾರರ ಸಿಮ್ ಗಳನ್ನು ದುರ್ಬಳಕೆ ಮಾಡಿಕೊಂಡಿತ್ತಂತೆ. ಆಳಂದ ಸುತ್ತ ಮುತ್ತಬಕೋಳಿ ಫಾರಂನಲ್ಲಿ ಕೆಲಸ‌ ಮಾಡುತ್ತಿದ್ದವರ ಸಿಮ್ ಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಎಸ್ಐಟಿ ಸದ್ಯ ತನಿಖೆಯನ್ನ ಚುರುಕುಗೊಳಿಸಿದ್ದು, ಸುಟ್ಟು ಹೋಗಿರುವ ವೋಟರ್ ಐಡಿಗಳನ್ನೆಲ್ಲಾ ಕಲೆಕ್ಟ್ ಮಾಡಿಕೊಂಡಿದೆ. ಎಲ್ಲದರ ಬಗ್ಗೆಯೂ ವಿಚಾರಣೆಗೆ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಈಗ ಈ ಬಗ್ಗೆ ಮಾಹಿತಿ ಬರ್ತಾ ಇದೆ. ಪ್ರತಿಯೊಂದು ವೋಟಿಗೂ ಕೂಡ 80 ರೂಪಾಯಿಯನ್ನು ನೀಡಿ ಡಿಲೀಟ್ ಮಾಡಿದ್ದಾರಂತೆ. ರಾಹುಲ್ ಗಾಂಧಿ ಅವರು ಹೇಳಿದಾಗ ಬಹಳಷ್ಟು ಟೀಕೆಗಳು ಬಂತು. ಈಗ ಒಂದೊಂದಾಗಿ ದಾಖಲೆ ಸಮೇತ ಹೊರಗೆ ಬರ್ತಾ ಇದೆ. ಇನ್ನು ಸಾಕ್ಷಿಗಳು ಸಿಕ್ತಾ ಇದಾವೆ. ಬಿಜೆಪಿಯವರಿಗೆ ನನ್ನ ಪ್ರಶ್ನೆ, ಪ್ರಜಾಪ್ರಭುತ್ವವನ್ನ ಮಾರಾಟಕ್ಕೆ ಇಟ್ಟಿದ್ದಾರಾ ಅಂತ. ಬೇರೆ ಬೇರೆ ರಾಜ್ಯದಲ್ಲೂ ಇದೇ ರೀತಿ ಮತಗಳ್ಳತನ ನಡೆದಿದೆ. ಅದೆನ್ನೆಲ್ಲಾ ಸಾಕ್ಷಿ ಸಮೇತ ಪ್ರೂವ್ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now