Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ 83% ಜನರಿಗೆ ಮೊದಲ ಡೋಸ್ ನೀಡಲಾಗಿದೆ : ಸಚಿವ ಸುಧಾಕರ್

Facebook
Twitter
Telegram
WhatsApp

ಹುಬ್ಬಳ್ಳಿ: ಇಡೀ ಜಗತ್ತಿನಲ್ಲಿ ಉಚಿತ ಹಾಗೂ ಬೇರೆ ದೇಶಗಳಿಗಿಂತ ಹೆಚ್ಚು ಪಟ್ಟು ಲಸಿಕೆಯನ್ನು ಭಾರತದಲ್ಲಿ ನೀಡಿರುವುದು ಮೈಲುಗಲ್ಲಾಗಿದೆ. ಇನ್ನೂ ಉಳಿದವರಿಗೆ ವೇಗವಾಗಿ ಲಸಿಕೆ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶೇ.83 ಜನರಿಗೆ ಮೊದಲ ಡೋಸ್ ಹಾಗೂ ಶೇ.38 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಭಾರತದಲ್ಲಿ ಅಮೆರಿಕದ ಎರಡೂವರೆ ಪಟ್ಟು, ಬ್ರೆಜಿಲ್ ನ 4 ಪಟ್ಟು, ಜಪಾನ್ ನ 8 ಪಟ್ಟು, ಇಂಗ್ಲೆಂಡ್ ನ 10 ಪಟ್ಟು, ಯುರೋಪ್ ದೇಶಗಳ 2 ಪಟ್ಟು ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಎರಡೂ ಡೋಸ್ ಪಡೆದವರ ಸಂಖ್ಯೆ 27.4 ಕೋಟಿ. ಅನೇಕ ದೇಶಗಳಲ್ಲಿ ಹಣ ಕೊಟ್ಟು ಖರೀದಿ ಮಾಡುವ ವ್ಯವಸ್ಥೆ ಇದ್ದು, ಭಾರತದಲ್ಲಿ ಉಚಿತ ಲಸಿಕೆ ನೀಡಲಾಗಿದೆ. ಇದಕ್ಕಾಗಿ 35 ಸಾವಿರ ಕೋಟಿ ರೂ. ನೀಡಲಾಗಿದೆ. ಲಸಿಕೆ ಖರೀದಿಗೆ ರಾಜ್ಯ ಸರ್ಕಾರದಿಂದ ಒಂದು ರೂಪಾಯಿಯೂ ನೀಡಿಲ್ಲ. ಕರ್ನಾಟಕದಲ್ಲಿ ಅತಿ ಕಡಿಮೆ ಲಸಿಕೆಯನ್ನು ಮಾರ್ಚ್ ನಲ್ಲಿ ನೀಡಲಾಗಿತ್ತು. ಸೆಪ್ಟೆಂಬರ್ ನಲ್ಲಿ 1.48 ಕೋಟಿ ನೀಡಲಾಗಿತ್ತು. ಒಂದೇ ದಿನ 31.75 ಲಕ್ಷ ಲಸಿಕೆಯನ್ನು ಸೆಪ್ಟೆಂಬರ್ 17 ರಂದು ನೀಡಲಾಗಿತ್ತು ಎಂದರು.

ರಾಜ್ಯದಲ್ಲಿ ಇನ್ನೂ ಶೇ.17 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.62 ಜನರಿಗೆ 2ನೇ ಡೋಸ್ ನೀಡಬೇಕಿದೆ. ರಾಜ್ಯದಲ್ಲಿ ಈಗ 60 ಲಕ್ಷ ಲಸಿಕೆ ದಾಸ್ತಾನು ಇದೆ. ಒಂದನೇ ಡೋಸ್ ಪಡೆದವರು ಎರಡನೇ ಡೋಸ್ ಪಡೆಯಲು ಉದಾಸೀನ ತೋರಬಾರದು. ಒಂದೇ ಡೋಸ್ ನಿಂದ ಸಂಪೂರ್ಣ ರೋಗನಿರೋಧಕ ಶಕ್ತಿ ದೊರೆಯುವುದಿಲ್ಲ. ಎರಡನೇ ಡೋಸ್ ಅನ್ನು 52 ಲಕ್ಷ ಜನರು ಪಡೆಯಬೇಕಿದ್ದು, ಅವರು ಆದಷ್ಟು ಬೇಗ ಬಂದು ಲಸಿಕೆ ಪಡೆಯಬೇಕು ಎಂದರು.

100 ಕೋಟಿ ಕೋವಿಡ್ ಲಸಿಕೆಯ ದೊಡ್ಡ ಮೈಲಿಗಲ್ಲನ್ನು ದೇಶ ತಲುಪಿದೆ. ಲಸಿಕೆ ಆವಿಷ್ಕರಿಸಿದ ವಿಜ್ಞಾನಿಗಳು, ಆರೋಗ್ಯ ಸಿಬ್ಬಂದಿ, ಪೊಲೀಸ್ ಇಲಾಖೆ ಎಲ್ಲರೂ ಇದಕ್ಕಾಗಿ ಶ್ರಮಿಸಿದ್ದಾರೆ. ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಞರು, ಕಾರ್ಯಕರ್ತರು ಕೂಡ ಹಗಲಿರುಳು ಕೊರೊನಾ ನಿಯಂತ್ರಿಸಲು ಶ್ರಮಿಸಿದ್ದಾರೆ. ಎಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ. ಬಿಸಿಜಿ ಲಸಿಕೆ ಆವಿಷ್ಕಾರವಾದ 24 ವರ್ಷಗಳ ಬಳಿಕ ಭಾರತಕ್ಕೆ ಬಂತು. ಹೆಪಟೈಟಿಸ್-ಬಿ 15 ವರ್ಷದ ಬಳಿಕ ಬಂದಿತ್ತು. 12 ರೋಗಗಳ ಲಸಿಕೆಗಳು ಬೇರೆ ದೇಶಗಳಿಂದ ಭಾರತಕ್ಕೆ ಬರಲು ಅನೇಕ ವರ್ಷ ಬೇಕಾಯಿತು. ಆದರೆ ಕೊರೊನಾ ಲಸಿಕೆಯನ್ನು 2021 ರ ಜನವರಿ 16 ರಂದು ಮೊದಲು ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆ, ದೂರದೃಷ್ಟಿ, ನಾಯಕತ್ವದಿಂದ ಇದನ್ನು ಸಾಧಿಸಲು ಸಾಧ್ಯವಾಗಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!