Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಫೆಬ್ರವರಿ 14 ರಿಂದ 18 ರವರೆಗೆ ಕಬೀರಾನಂದ ಆಶ್ರಮದಲ್ಲಿ 93ನೇ ಮಹಾಶಿವರಾತ್ರಿ ಮಹೋತ್ಸವ : ಅದ್ದೂರಿಯಾಗಿ ಆಚರಣೆಗೆ ಸಮಿತಿ ನಿರ್ಧಾರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಫೆ.10) :  ಫೆಬ್ರವರಿ 14 ರಿಂದ 18 ರವರೆಗೆ ನಡೆಯಲಿರುವ ನಗರದ ಶ್ರೀ ಕಬೀರಾನಂದ ಆಶ್ರಮದಲ್ಲಿ ನಡೆಯುವ ಶಿವನಾಮ ಸಪ್ತಾಹದ ಅಂಗವಾಗಿ 93ನೇ ಮಹಾಶಿವರಾತ್ರಿ ಮಹೋತ್ಸವವನ್ನು ಯಾವುದೇ ರೀತಿಯಲ್ಲಿ ಕುಂದು ಬಾರದ ರೀತಿಯಲ್ಲಿ ನಡೆಸಲು ವಿವಿಧ ಸಮಿತಿಯ ಮುಖಂಡರು ತೀರ್ಮಾನಿಸಿದರು.

ನಗರದ ಕಬೀರಾನಂದಾಶ್ರಮದಲ್ಲಿ ಶಿವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಸಮಿತಿಗಳ ಸಭೆಯನ್ನು ನಡೆಸಿದ ಪದಾಧಿಕಾರಿಗಳು ಎಂದಿನಂತೆ ಈ ಭಾರಿಯೂ ಶಿವರಾತ್ರಿ ಮಹೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕಿದೆ. ಇಲ್ಲಿ ಯಾವುದಕ್ಕೂ ಸಹಾ ತೊಂದರೆಯಾಗದ ರೀತಿಯಲ್ಲಿ ನಡೆಯಬೇಕಿದೆ. ಚಿತ್ರದುರ್ಗದಲ್ಲಿ ಈ ಆಶ್ರಮದಲ್ಲಿ ಮಾತ್ರವೇ ಶಿವರಾತ್ರಿ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ ಇದು ಜಾತ್ಯಾತೀತ ಮಠವಾಗಿದೆ ಇಲ್ಲಿ ಒಂದು ಜಾತಿಯವರು ಅಲ್ಲದೆ ಎಲ್ಲಾ ಜಾತಿಯವರು ಸಹಾ ಬರುತ್ತಾರೆ. ಇಲ್ಲಿಗೆ ಭಕ್ತರೇ ಆಧಾರವಾಗಿದ್ದಾರೆ ಶ್ರೀಗಳು ಯಾರಿಂದಲೂ ಸಹಾ ಒತ್ತಾಯವಾಗಿ ದೇಣಿಗೆಯನ್ನು ಕೇಳುವುದಿಲ್ಲ ಭಕ್ತರೇ ಇಷ್ಠು ಪಟ್ಟು ನೀಡಿದರೆ  ಮಾತ್ರ ಪಡೆಯುತ್ತಾರೆ.

ಈ ರಚನೆ ಮಾಡಿರುವ ಸಮಿತಿಯವರು ಅವರ ಕೆಲಸವನ್ನು ಮಾಡುವುದರ ಮೂಲಕ ಮಹೋತ್ಸವನ್ನು ಅಚ್ಚುಕಟ್ಟಾಗಿ ಮಾಡಬೇಕಿದೆ. ಇದು ಆರೂಢ ಪರಂಪರೆಯ ಮಠವಾಗಿದ್ದು ಇಲ್ಲಿ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಮಹೋತ್ಸವದ ಕೆಲಸವನ್ನು ಮನೆಯ ಕೆಲಸದ ಹಾಗೇ ಎಲ್ಲರು ಸೇರಿ ಮಾಡಬೇಕಿದೆ.

ಫೆ. 12 ರಿಂದ ಶಿವನಾಮ ಸಪ್ತಾಹದ ಅಂಗವಾಗಿ ಅಂದು ಗೊಪೂಜೆಯನ್ನು ಮಾಡುವುದರ ಮೂಲಕ ಚಾಲನೆಯನ್ನು ನೀಡಿ ಮಹೋತ್ಸವ ಮುಗಿಯುವವರೆಗೂ ಆಶ್ರಮದಲ್ಲಿ ನಿರಂತರವಾಗಿ ಸಾಮೂಹಿಕವಾಗಿ ಶ್ರೀಮದ್ ಭಗವದ್ಗೀತಾ ಪಾರಾಯಣ ನಡೆಯಲಿದೆ.

ಫೆ. 14 ರಿಂದ ಪ್ರಾರಂಭವಾಗುವ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ದಿನ ನಡೆಯುವ ಕಾರ್ಯಕ್ರಮದಲ್ಲಿ ನಾಡಿನ ಸುಪ್ರಸಿದ್ದ ವಿವಿಧ ಮಠಾಧಿಶರು, ಸಾಹಿತಿಗಳು, ಗಣ್ಯರು ರಾಜಕಾರಣಿಗಳು ಆಗಮಿಸುವುದರ ಮೂಲಕ ಸಂದೇಶವನ್ನು ನೀಡಲಿದ್ದಾರೆ ಎಂದರು.

ಈ ಸಭೆಯಲ್ಲಿ ಶ್ರೀಮಠದ ನಿರಂಜನ ಮೂರ್ತಿ, ತಿಪ್ಪೇಸ್ವಾಮಿ, ಶಾಸ್ತ್ರಿ, ವಿಎಚ್ ಪಿಯ ರುದೇಶ್, ಓಂಕಾರ್, ವೆಂಕಟೇಶ್, ಪವನ್, ನಂದಿನಾಗರಾಜ್, ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...