Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ತಮ್ಮದೇ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ರಾಜು ಕಾಗೆ..!

ರಾಜು ಕಾಗೆ
---Advertisement---

ಬೆಳಗಾವಿ: ನಮ್ಮ ರಾಜ್ಯದಲ್ಲಿಯೇ ಕೆಲ ಜಿಲ್ಲೆಗಳ ಪೈಕಿ ಪ್ರತ್ಯೇಕ ರಾಜ್ಯ ಮಾಡಬೇಕೆಂಬ ಕೂಗು ಮೊದಲಿನಿಂದಲೂ ಕೇಳಿ ಬರ್ತಿದೆ. ಆ ಪೈಕಿ ಉತ್ತರ ಕರ್ನಾಟಕ ಕೂಡ ಒಂದು. ಈಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ. ಅದು ತಮ್ಮದೇ ಪಕ್ಷದ ವಿರುದ್ಧ ಕೇಳಿ ಬಂದ ಧ್ವನಿ. ಶಾಸಕ ರಾಜು ಕಾಗೆ ಈ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಒತ್ತಾಯ ಮಾಡಿರುವ ರಾಜು ಕಾಗೆ ಅವರು, ಅಭಿವೃದ್ಧಿಯಲ್ಲಿ ತಾರತಮ್ಯ ನಿವಾರಿಸಬೇಕು. ಇಲ್ಲವೇ ಉತ್ತರ ಕರ್ನಾಟಕವನ್ನ ಪ್ರತ್ಯೇಕ ರಾಜ್ಯವಾಗಿ ಘೋಷಣೆ ಮಾಡಬೇಕು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬೇಡಿಕೆಯ ವಿಚಾರವನ್ನು ಪ್ರಸ್ತಾಪ ಮಾಡಲಾಗುತ್ತದೆ. ಹೋರಾಟದ ನೇತೃತ್ವವನ್ನು ನಾನೇ ವಹಿಸುತ್ತೇನೆ. ಈ ಭಾಗದ ಎಲ್ಲಾ ಶಾಸಕರು ನನ್ನ ಜೊತೆಗೆ ಇದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ದಕ್ಷಿಣ ಕನ್ನಡಕ್ಕೆ ಹೋಲಿಕೆ ಮಾಡಿದರೆ, ಉತ್ತರ ಕರ್ನಾಟಕ ತೀರಾ ಹಿಂದುಳಿದಿದೆ. ದಕ್ಷಿಣ ಭಾಗಕ್ಕೆ ತೋರಿಸುವಂತಹ ವಿಶೇಷ ಕಾಳಜಿ, ಉತ್ತರ ಕರ್ನಾಟಕಕ್ಕೆ ಯಾಕಿಲ್ಲ. ಎಲ್ಲರೂ ಕನ್ನಡ ನಾಡಿನ ಮಕ್ಕಳೇ. ಆದರೂ ಮಲತಾಯಿ ಧೋರಣೆಯನ್ನೇಕೆ ತೋರುತ್ತಾರೆ. ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಸೇರಿ ಒಂದು ರಾಜ್ಯ ಮಾಡಬೇಕು. ಕರ್ನಾಟಕ ಏಕೀಕರಣವಾದಾಗಿನಿಂದ ಈ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ. ಅನ್ಯಾಯವಾಗಿದೆ. ಪ್ರತ್ಯೇಕ ರಾಜ್ಯದ ರಚನೆಯಿಂದ ಮತ್ತೊಂದು ಕನ್ನಡ ನಾಡು ರಚನೆಯಾಗಲಿದೆ ಎಂದಿದ್ದಾರೆ. ರಾಜು ಕಾಗೆ ಅವರು ಈ ಮೊದಲು ಕೂಡ ರಾಜು ಕಾಗೆ ಅವರು ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ ಮಾಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...