Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಸ್ವದೇಶೀ ಮೇಳ : ಗೊರವರ ಕುಣಿತ, ವೀರಗಾಸೆ ಹಾಗೂ ಯಕ್ಷಗಾನ ವೈಭವ ಪ್ರಮುಖ ಆಕರ್ಷಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ ಶ್ರೀ ಜಗದ್ಗುರು ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಇಂದಿನಿಂದ (ನವೆಂಬರ್ 12) 16ರ ವರೆಗೆ ನಡೆಯಲಿರುವ ರಾಜ್ಯಮಟ್ಟದ ವೈಭವದ ಸ್ವದೇಶೀ ಮೇಳ ನಡೆಯಲಿದೆ.

ಸ್ವದೇಶೀ ಜಾಗರಣ ಮಂಚ್ ಕರ್ನಾಟಕ ಪ್ರಾಂತ ಆಯೋಜಿಸಿರುವ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಸ್ಕಾರ ಭಾರತೀ ಸಹಯೋಗವಿರುವ ಸ್ವದೇಶೀ ಮೇಳದಲ್ಲಿ ಇಂದು (ನವೆಂಬರ್. 13, ಗುರುವಾರ) ಸಂಜೆ ಗೊರವರ ಕುಣಿತ (ಹಿರಿಯೂರು ತಾಲೂಕು ಅಡವಿ ರಾಮಜೋಗಿಹಳ್ಳಿ ತಂಡ) ಹಾಗೂ ವೀರಗಾಸೆ ಹೊಳಲ್ಕೆರೆ ತಾಲೂಕು ಗೂಳಿ ಹೊಸಹಳ್ಳಿ ತಂಡದ ವತಿಯಿಂದ ಸ್ಥಳೀಯ ಕಲಾವಿದರ ಕಲಾಪ್ರಸ್ತುತಿ ಕಾರ್ಯಕ್ರಮ ನೆರವೇರಲಿದ್ದು, ಸಂಜೆ 7 ರಿಂದ
ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧೃವ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ವೇತ ಕುಮಾರ ಚರಿತ್ರೆ ಯಕ್ಷಗಾನ ಕಲಾ ಪ್ರಸ್ತುತಿ ಕಾರ್ಯಕ್ರಮ ನೆರವೇರಲಿದೆ ಎಂದು ಸಂಸ್ಕಾರ ಭಾರತೀ ಚಿತ್ರದುರ್ಗ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ರಾವ್ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...