Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ 50‌ ಮಕ್ಕಳು ಅಸ್ವಸ್ಥ..!

Facebook
Twitter
Telegram
WhatsApp

ದಾವಣಗೆರೆ: ಇತ್ತೀಚೆಗೆ ವಸತಿ ಶಾಲೆ, ಶಾಲೆಯ ಬಿಸಿಯೂಟದಲ್ಲಿ ಪೊಉಡ್ ಪಾಯಿಸನ್ ಕೇಸ್ ಹೆಚ್ಚಳವಾಗುತ್ತಲೆ ಇದೆ. ಅಡುಗೆ ಮಾಡುವವರು ಎಚ್ಚರದಿಂದ ಇನ್ನು ಇರದೆ ಹೋದರೆ ಮಕ್ಕಳ ಬಗ್ಗೆ ಪೋಷಕರಲ್ಲಿ ಆತಂಕ ಮೂಡೋದು ಸಹಜ.

ಇದೀಗ ಮತ್ತೊಂದು ವಸತಿ ಶಾಲೆಯಲ್ಲಿ ಮಕ್ಕಳು ವಿಷಾಹಾರ ಸೇವಿಸಿ, ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿಷಾಹಾರ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆ ಸೇರಿದ್ದಾರೆ.

ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯದು. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಿದ ಅನ್ನ ಸಾಂಬಾರ್, ಪಾಯಸ ಸೇವಿಸಿದ್ದಾರೆ. ಇದರಿಂದಾಗಿ ಸಂಜೆ ವೇಳೆಗೆ ಹಲವು ಮಕ್ಕಳಲ್ಲಿ ವಾಂತಿ, ಲೂಸ್ ಮೋಷನ್ ಶುರುವಾಗಿದೆ. ಇದರಿಂದ 50ಕ್ಕೂ ಹೆಚ್ಚು ಮಕ್ಕಳನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಸೇರಿಸಿದ್ದು, ಉಳಿದ ಮಕ್ಕಳಿಗೆ ವಸತಿ ಶಾಲೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಓಡಿ ಬಂದ ಶಾಸಕ ರೇಣುಕಾಚಾರ್ಯ ಶಾಲೆ ಮತ್ತು ಆಸ್ಪತ್ರೆ ಎರಡು ಕಡೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ‌ಮಕ್ಕಳಿಗೂ ಧೈರ್ಯ ಹೇಳಿ ವಾಪಾಸ್ ಆಗಿದ್ದಾರೆ. ಇತ್ತೀಚೆಗೆ ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ವಿಷಾಹಾರಾ ಕೇಸ್ ದಾಖಲಾಗುತ್ತಿದೆ. ಮಕ್ಕಳಿಗೆ ಅಡುಗೆ ಮಾಡುವಾಗ ಕೊಂಚ ಎಚ್ಚರವಹಿಸುವುದು ತುಂಬಾ ಉತ್ತಮ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!