Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮುರುಘಾ ಶರಣರು ನಿರ್ದೋಷಿ : ಕೋರ್ಟ್ ತೀರ್ಪು…!

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 26 : ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಸ್ಕೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ನಿರ್ದೋಷಿ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಲಯ ಆದೇಶಿಸಿದೆ.

ಮುರುಘಾ ಶ್ರೀಗಳು ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ದಾಖಲಾಗಿರುವ ಆರೋಪಗಳಲ್ಲಿ ಸಾಕ್ಷ್ಯಧಾರಗಳು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ಅವರು ತೀರ್ಪು ನೀಡಿದ್ದಾರೆ.

ಮೊದಲ ಪೋಸ್ಕೊ ಪ್ರಕರಣದಲ್ಲಿ ಅವರನ್ನು ಖುಲಾಸೆ ಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಮುರುಘಾ ಶರಣರು, ವಾರ್ಡನ್ ರಶ್ಮಿ, ಪರಮಶಿವಯ್ಯ ಅವರು ನಿರ್ದೋಷಿಗಳು ಎಂದು ನ್ಯಾಯಾಲಯ ಪರಿಗಣಿಸಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೂ ಕೋರ್ಟ್ ಆದೇಶ ನೀಡಿದೆ. ಇಬ್ಬರು ಸಂತ್ರಸ್ಥೆಯರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಮೊದಲ ಕೇಸ್ ನಲ್ಲಿ ಪೊಲೀಸರು ಎರಡು ಚಾರ್ಜ್ ಷೀಟ್ ಸಲ್ಲಿಸಿದ್ದರು. ಮೊದಲ ಕೇಸ್ ನಲ್ಲಿ ಈಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಇದು ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಿಕ್ಕ ದೊಡ್ಡ ರೀಲೀಫ್‌ ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now