Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನಾಭರಣ ದರೋಡೆ ಕೇಸಲ್ಲಿ ಪಿಎಸ್ಐ ವಜಾ..!

---Advertisement---

ದಾವಣಗೆರೆ: ಹರುಷದ ಕೂಳಿಗೆ ವರ್ಷದ ಕೂಳನ್ನ ಕಳೆದುಕೊಂಡರು ಎಂಬ ಗಾದೆ ಮಾತಿದೆ. ದಾವಣಗೆರೆಯಲ್ಲಿ ಈ ಗಾದೆ ಮಾತಿಗೆ ಒಪ್ಪುವಂತ ಘಟನೆಯೇ ನಡೆದಿದೆ ನೋಡಿ. ಇತ್ತೀಚೆಗೆ ನೀವೆಲ್ಲಾ ಕೇಳಿರ್ತೀರಾ ಆಭರಣ ತಯಾರಕರಿಂದ ಸುಮಾರು 78 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ ಕೇಸ್. ಅದರಲ್ಲಿ ಈಗ ಪ್ರೊಬೆಷನರಿ ಐಪಿಎಸ್ ಮಾಳಪ್ಪ ಅವರನ್ನ ಸೇವೆಯಿಂದ ವಜಾ ಮಾಡಲಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ. ಇದೀಗ ಮತ್ತೊಬ್ಬ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಜನರಿಗೆ ರಕ್ಷಣೆ ಕೊಡುತ್ತಾರೆ, ಕಳ್ಳರಿಗೆ ದುಸ್ವಪ್ನವಾಗಿರುತ್ತಾರೆ ಎಂದು ನಂಬಿದವರೆ ಈ ರೀತಿ ಕೆಲಸ ಮಾಡಿದಾಗ ಸಾರ್ವಜನಿಕರಿಂದ ಸಹಜವಾಗಿಯೇ ವಿರೋಧ ವ್ಯಕ್ತವಾಗುತ್ತದೆ. ಹೀಗಾಗಿ ಈ ಸಂಬಂಧ ಆದೇಶ ಹೊರಡಿಸಿರುವ ಪೂರ್ವ ವಲಯದ ಐಜಿಪಿ ಬಿ ಆರ್ ರವಿಕಾಂತೇಗೌಡ ಅವರು, ಸಾರ್ವಜನಿಕ ರಕ್ಷಣೆ ನೀಡುವ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವಂತಹ ಬಹುಮುಖ್ಯ, ಜವಾಬ್ದಾರಿ ಲಯುತ ಹುದ್ದೆಯಲ್ಲಿದ್ದುಕೊಂಡು ದರೋಡೆ ಕೃತ್ಯ ಎಸಗಿದ್ದು ಘೋರ ಅಪರಾಧವಾಗಿದೆ. ಮೊದಲ ಆರೋಪಿ ಮಾಳಪ್ಪ ಅವರನ್ನ ವಜಾ ಮಾಡಲಾಗಿದೆ. ಪ್ರವೀಣ್ ಕುಮಾರ್ ಅವರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಾಳಪ್ಪ ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡ್ತಾ ಇದ್ದರು. ಪ್ರವೀಣ್ ಕುನಾರ್ ರಾಣೇಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಯಾಗಿದ್ದರು. ನವೆಂಬರ್ 24 ರಂದು ನಸುಕಿನಲ್ಲಿ ಕಾರವಾರದ ಅರ್ಕಸಾಲಿ ಅವರಿಂದ ಸುನಾರು 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದರು. ಈಗ ಕೆಲಸದಿಂದಾನೇ ವಜಾಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)