Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹುಟ್ಟುಹಬ್ಬಕ್ಕೂ ಮೊದಲೇ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ..!

---Advertisement---

ಬೆಂಗಳೂರು: ಹುಟ್ಟು ಯಾವಾಗ ಅಂತ ಸರಿಯಾಗಿ ಹೇಳಬಹುದು. ಆದರೆ ಸಾವು ಯಾವಾಗ ಅನ್ನೋದಿರಲಿ, ಹೇಗೆ ಬರುತ್ತೆ, ಎಲ್ಲಿ ಬರುತ್ತೆ ಎಂಬುದನ್ನು ಹೇಳುವುದಕ್ಕೂ ಯಾರಿಂದಲೂ ಸಾಧ್ಯವಿಲ್ಲ. ಆರ್ ವಿ ದೇವರಾಜ್ ಅವರ ಸಾವು ಹಾಗೇ ಆಗಿದೆ. ಚಾಮುಂಡಿ ತಾಯಿಯ ದರ್ಶನ ಪಡೆಯಲು ಹೋದಾಗಲೂ ಈ ಘಟನೆ ನಡೆದಿದೆ‌. ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರಿಗೆ ಹೃದಯಾಘಾತವಾಗಿದ್ದು, ಇಂದು ನಿಧನರಾಗಿದ್ದಾರೆ. ರೋಣೂರು ವೆಂಕಟೇಶಪ್ಪ ದೇವರಾಜ್ ಅವರು ಚಾಮರಾಜಪೇಟೆ ಜನರ ಅಚ್ಚುಮೆಚ್ಚಿನ ನಾಯಕರಾಗಿದ್ದರು. ಆದ್ರೆ ವಿಧಿ ಅವರನ್ನ ತನ್ನ ಜೊತೆಗೆ ಬಾರದ ಲೋಕಕ್ಕೆ ಕರೆದುಕೊಂಡು ಹೋಗಿದೆ. ಆರ್ ವಿ ದೇವರಾಜ್ ಅವರು ಚಿಕ್ಕಪೇಟೆಯ ಮಾಜಿ ಶಾಸಕರಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದರು.

ನಾಳೆ ಅಂದ್ರೆ ಡಿಸೆಂಬರ್ 3 ರಂದು ಆರ್ ವಿ ದೇವರಾಜ್ ಅವರ ಹುಟ್ಟುಹಬ್ಬ. ಹೀಗಾಗಿ ನಿನ್ನೆ ಮೈಸೂರಿಗೆ ತೆರಳಿದ್ದರು. ಚಾಮುಂಡಿ ತಾಯಿಯ ದರ್ಶನವನ್ನು ಮಾಡಿದ್ರು. ದರ್ಶನದ ಬಳಿಕ ಹಾರ್ಟ್ ಅಟ್ಯಾಕ್ ಆಗಿದೆ. ತಕ್ಷಣ ಅವರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಆರ್ ವಿ ದೇವರಾಜ್ ಅವರು ಡಿಸೆಂಬರ್ 3, 1970ರ ದಶಕದಲ್ಲಿ ಯುವ ಕಾಂಗ್ರೆಸ್ ನೊಂದಿಗೆ ರಾಜಕೀಯ ಆರಂಭಿಸಿದ್ರು. ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಆಗಿ ಮೊದಲು ಸೇವೆ ಸಲ್ಲಿಸಿದ್ದಾರೆ. ಬಳಿಕ 1989ರಲ್ಲಿ ಚಾಮರಾಜಪೇಟೆಯಿಂದ ವಿಧಾನಸಭೆಗೆ ಪ್ರವೇಶಿದ್ದರು. ಸತತ ಎರಡು ಬಾರಿ ಚಾಮರಾಜಪೇಟೆಯಿಂದ ಗೆಲುವು ಸಾಧಿಸಿದ್ರು. ಅಲ್ಲದೆ ಕೆಎಸ್ಆರ್ಟಿಸಿಯ ಅಧ್ಯಕ್ಷರಾಗಿ ಎರಡು ಬಾರಿ, 2000 ದಿಂದ 2007 ರವರೆಗೆ ಕೆಎಸ್ಆರ್ಟಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now