ಬೆಳಗಾವಿ ಅಧಿವೇಶನ ಆರಂಭ : ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಏನಂದ್ರು ಹೊರಟ್ಟಿ..?

1 Min Read

ಬೆಳಗಾವಿ: ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 157ನೇ ಅಧಿವೇಶನ ನಡೆಯುತ್ತಿದೆ. ಪ್ರತಿಸಲದ ಅಧಿವೇಶನದ ಸಮಯದಲ್ಲೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಾ ಎಂಬ ನಿರೀಕ್ಷೆಯಮ್ನ ಇಟ್ಟುಕೊಳ್ಳಲಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮಾಹಿತಿ ನೀಡಿದ್ದಾರೆ.

 

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ‌ ಕಲ್ಪಿಸಲಾಗುವುದು.

 

ಪ್ರತಿ ಬುಧವಾರ ಮತ್ತು ಗುರುವಾರ ನಡೆಯುವ ಇಡೀ ದಿನದ ಕಲಾಪದಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ ಇದ್ಯಾವುದಕ್ಕು ಅವಕಾಶ ನೀಡದೇ ಕೃಷ್ಣಮೇಲ್ದಂಡೆ ಯೋಜನೆ, ಮಹಾದಾಯಿ, ಕಳಸಾ ಬಂಡೂರಿ ಯೋಜನೆಗಳ ಅನುಷ್ಠಾನದ ಬಗ್ಗೆ, ಅರಣ್ಯಭೂಮಿ ಅತೀಕ್ರಮಣ, ಸಂತ್ರಸ್ಥರ ಸಮಸ್ಯೆ ಹಾಗೂ ಪರಿಹಾರೋಪಾಯಗಳು., ಉತ್ತರ ಕರ್ನಾಟಕ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಪರಿಹಾರಗಳು ಮತ್ತು ಉದ್ಯೋಗ ಸೃಷ್ಠಿಗೆ ಕ್ರಿಯಾಯೋಜನೆ ವಿಷಯಗಳ‌ ಮೇಲೆ ಅಂದು ಇಡೀ ದಿನ ಚರ್ಚೆಗೆ ಅವಕಾಶ ನೀಡಲಾಗುವುದು. ಚರ್ಚೆ ಪೂರ್ಣವಾಗುವವರೆಗೆ ಸದನವನ್ನು ಮುಂದೂಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
157ನೇ ಪರಿಷತ್ ಅಧಿವೇಶನದಲ್ಲಿ 10 ದಿನಗಳನ್ನು ಉಪವೇಶನದ ದಿನಗಳೆಂದು ನಿಗದಿಪಡಿಸಲಾಗಿದೆ ಎಂದಿದ್ದಾರೆ.

Share This Article
Enable Notifications OK No thanks