Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾಖಲೆ ಬರೆದ ಬೆಳ್ಳಿ ದರ : ಎಷ್ಟಿದೆ ಈಗ ಬೆಲೆ..?

---Advertisement---

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೆ ಇದೆ. ಆದರೆ ಬೆಳ್ಳಿ ಬೆಲೆಯಲ್ಲೂ ದಾಖಲೆಯನ್ನ ಬರೆದಿದೆ. ಇಂದಿನ ಬೆಳ್ಳಿ ಬೆಲೆ ಮಾರುಕಟ್ಟೆಯಲ್ಲಿ ಗ್ರಾಂಗೆ 9 ರೂಪಾಯಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿಯೂ ಏರಿಕೆಯೇ ಕಂಡಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 80 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 11,945 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 87 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 13,031 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 1,19,450 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,30,031 ರೂಪಾಯಿ ಆಗಿದೆ.

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 11,945 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 11,960 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 11,482 ರೂಪಾಯಿ ಇದೆ. ಅಮೆರಿಕಾದಲ್ಲಿ 11,785 ಇದೆ. ಸೌದಿಯಲ್ಲಿ 1,459 ರೂಪಾಯಿ ಇದೆ.

ಬೆಳ್ಳಿ ಬೆಲೆಯಲ್ಲಿ 9 ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 199 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 19,900 ರೂಪಾಯಿ ಆಗಿದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 700 ಹೆಚ್ಚಾಗಿದೆ. ಈ ಮೂಲಕ ಕೆಲವೊಂದು ಭಾಗದಲ್ಲಿ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now