ಚಿತ್ರದುರ್ಗ | ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಾವು…!

1 Min Read

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 11 :ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನಪ್ಪಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಜಿ ಆರ್ ಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಜಿ.ಆರ್ ಹಳ್ಳಿ ನಿವಾಸಿಯಾದ ಮಾರುತಿ (19) ಹಾಗೂ ವಿಶ್ವನಾಥ್ (23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕುರಿ ಮೇಕೆಗಳಿಗೆ ಹೊಂಡದಲ್ಲಿ ನೀರು ಕುಡಿಸುಲು ಹೋಗಿದ್ದಾಗ ಆಕಸ್ಮಿಕವಾಗಿ ಮಾರುತಿ ಮತ್ತು ವಿಶ್ವನಾಥ್ ಕಾಲು ಜಾರಿ ಬಿದ್ದಿದ್ದಾರೆ.ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Enable Notifications OK No thanks