Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂತ್ರ ಕುತಂತ್ರದಿಂದ ಅತಿಥಿ ಉಪನ್ಯಾಸಕರ ಬದುಕನ್ನ ಇನ್ನಷ್ಟು ಅಭದ್ರಗೊಳಿಸಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಟ್ವೀಟ್ ಮಾಡಿ ಬೇಸರ ಹೊರ ಹಾಕಿರುವ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ಕಾರ್ಯಭಾರದ ಎಂಟು ಗಂಟೆಯ ಅವಧಿಯನ್ನು ಹಿಂದಿನಂತೆಯೇ ಉಳಿಸಬೇಕು ಮತ್ತು ಈಗಾಗಲೇ ನಿವೃತ್ತಿಗೆ ಸಮೀಪ ಇರುವ ಅತಿಥಿ ಉಪನ್ಯಾಸಕರೂ ಸೇರಿದಂತೆ ಎಲ್ಲರಿಗೂ ಸೇವಾ ಭದ್ರತೆಯನ್ನು ಒದಗಿಸಬೇಕು.

ಕಾರ್ಯಭಾರವನ್ನು ದುಪ್ಪಟ್ಟು ಗೊಳಿಸುವ ನಿರ್ಧಾರದಿಂದಾಗಿ ಸುಮಾರು 14-15 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಯ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದು ಈ ಅನುಮಾನವನ್ನು ಬಲಪಡಿಸಿದೆ.

ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸುವ ಜೊತೆಯಲ್ಲಿ ಅವರ ತರಗತಿಗಳ ಅವಧಿಯನ್ನು ಹೆಚ್ಚಿಸಿರುವ @BJP4Karnataka ಸರ್ಕಾರ,
ಅರ್ಧದಷ್ಟು ಅತಿಥಿ ಉಪನ್ಯಾಸಕರನ್ನು ಮನೆಗೆ ಕಳಿಸಲು ಹೊರಟಿರುವುದು ಸ್ಪಷ್ಟವಾಗಿದೆ. ಇದು ನಿರಂತರ ಶೋಷಿತ ಅತಿಥಿ ಉಪನ್ಯಾಸಕರಿಗೆ ಬಗೆದಿರುವ ದ್ರೋಹವಾಗಿದೆ.

ಅತಿಥಿ ಉಪನ್ಯಾಸಕರ 8 ಗಂಟೆಯ ತರಗತಿಗಳಿಗೆ ನೀಡುತ್ತಿದ್ದ 11-12 ಸಾವಿರ ಗೌರವಧನವನ್ನ ರೂ.30-32 ಸಾವಿರಕ್ಕೆ ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ತರಗತಿಗಳ ಅವಧಿಯನ್ನು 8 ಗಂಟೆಯಿಂದ 16 ಗಂಟೆಗೆ ಹೆಚ್ಚಿಸಿ ಒಂದು ಕೈಯಲ್ಲಿ ಕೊಟ್ಟಿರುವುದನ್ನು ಇನ್ನೊಂದು ಕೈಯಿಂದ ಕಿತ್ತುಕೊಂಡಿದೆ.

ಗೌರವಧನ ಹೆಚ್ಚಿಸಿ, ಸೇವಾ ಸೌಲಭ್ಯ ಒದಗಿಸಿ ಅತಿಥಿ ಉಪನ್ಯಾಸಕರ ಬದುಕಿಗೆ ನೆರವಾಗಬೇಕಾಗಿದ್ದ @BJP4Karnataka ತನ್ನ ತಂತ್ರ-ಕುತಂತ್ರದ ಕ್ರಮಗಳ ಮೂಲಕ ಅವರ ಬದುಕನ್ನು ಇನ್ನಷ್ಟು ಅಭದ್ರಗೊಳಿಸಿ ವಿಶ್ವಾಸದ್ರೋಹ ಎಸಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!