ಬೆಳಗಾವಿ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೊಂಡಿದ್ದಾರೆ. ಅದಕ್ಕೆ ಕಾರಣ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತಿನ ದಾಟಿ. ವಿಜಯೇಂದ್ರ ಅವರನ್ನು ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದರೆ ಇದಕ್ಕೆ ಯತ್ನಾಳ್ ಅವರ ವಿರೋಧವಿದೆ. ಹೀಗಾಗಿಯೇ ಕಂಡಕಂಡಲ್ಲಿ ಯಡಿಯೂರಪ್ಪ ಅವರ ಫ್ಯಾಮಿಲಿ ಬಗ್ಗೆ ನಾಲಿಗೆ ಹರಿಬಿಡುತ್ತಿದ್ದರು. ಆ ಕಾರಣಕ್ಕಾಗಿಯೇ ಉಚ್ಛಾಟಿತರು ಆದರು. ಇದೀಗ ವಾಪಾಸ್ ಆಗುವುದಕ್ಕೆ ಷರತ್ತುಗಳನ್ನ ಇಟ್ಟಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಯತ್ನಾಳ್ ಅವರು, ಬಿಜೆಪಿಯ ಮೂರ್ನಾಲ್ಕು ಶಾಸಕರೇ ಪಕ್ಷಕ್ಕೆ ವಾಪಸ್ ಬನ್ನಿ ಎಂದು ಕರೆದಿದ್ದಾರೆ. ಅಶೋಕ್ ಕಚೇರಿಯಲ್ಲಿ ಶಾಸಕರು ಚರ್ಚೆ ಮಾಡಿದ್ದು, ಪಕ್ಷಕ್ಕೆ ವಾಪಾಸಾಗಿ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಉತ್ಸಾಹ ಇಲ್ಲ, ಹೋರಾಟಕ್ಕೆ ಜನರೂ ಸೇರುತ್ತಿಲ್ಲ. ನೀವೂ ಹೋದಲೆಲ್ಲಾ ಸಾವಿರಾರು ಜನ ಸೇರುತ್ತಾರೆ. ಜನಪ್ರಿಯತೆ ಹೆಚ್ಚಾಗಿರುವುದರಿಂದ ಮತ್ತೆ ಬಿಜೆಪಿಗೆ ಬನ್ನಿ ಎಂದು ಬಿಜೆಪಿ ನಾಯಕರು ಕರೆಯುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಾಗೇ ಸುಮ್ಮನೆ ಶಾಸಕನಾಗಿ ಬಿಜೆಪಿಗೆ ವಾಪಾಸ್ ಹೋಗುವುದಿಲ್ಲ. ಏನಾದರೂ ಮಾತುಕೊಟ್ಟರೆ ಮಾತ್ರ ಪಕ್ಷಕ್ಕೆ ಬರುತ್ತೇನೆಂದು ಹೇಳಿದ್ದೇನೆ ಎಂದಿದ್ದಾರೆ.
ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಅಥವಾ ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಮುಂದೆ ಸಿಎಂ ಸ್ಥಾನ ಕೊಡಬೇಕು ಎಂದು ಹೇಳಿದ್ದೇನೆ. ಅಮಿತ್ ಶಾ ಭೇಟಿ ಮಾಡಿಸುತ್ತೇವೆ ಅಂತ ನನಗೆ ಯಾರೂ ಹೇಳಿಲ್ಲ. ಒಂದು ವೇಳೆ ಅವರಾಗಿ ಕರೆದು ಎಲ್ಲದಕ್ಕೂ ಒಪ್ಪಿಕೊಂಡಿದ್ದೇವೆ ಅಂದ್ರೆ ಹೋಗುತ್ತೇನೆ. ಆ ಅವಕಾಶ ಸಿಕ್ಕಿದರೆ ಮುಂದಿನ ಸೀಟ್ನಲ್ಲಿ ಕೂರಿವುದು, ಇಲ್ಲವಾದರೆ ಜೆಸಿಬಿ ಪಕ್ಷ ಮಾಡುವುದು ಎಂಬುದನ್ನ ಸ್ಪಷ್ಟ ಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








