Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅದ್ದೂರಿಯಾಗಿ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 17 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ ಹಾಗೂ ಮಹೇಶ್ವರಸ್ವಾಮಿ ಜಾತ್ರೆಯನ್ನು ಡಿ.16ರ ಮಂಗಳವಾರ ನಡೆಸಲಾಯಿತು.

ಬೆಳಿಗ್ಗೆ ಮಹೇಶ್ವರಸ್ವಾಮಿ ಜಾತ್ರೆಯನ್ನು ಹಮ್ಮಿಕೊಂಡು ಮಂಗಳವಾರ ಮುಂಜಾನೆ ಈ ಅದ್ಧೂರಿ ಜಾತ್ರೆಯಲ್ಲಿ ಆಬಾಲವೃದ್ಧರಾದಿಯಾಗಿ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಮಾಗಿಯ ಚಳಿಯನ್ನೂ ಲೆಕ್ಕಿಸದೇ ಶೈಕ್ಷಣಿಕ ಪ್ರಗತಿ, ಮದುವೆ, ಆರೋಗ್ಯ ಸಮಸ್ಯೆ ನಿವಾರಣೆ ಮತ್ತಿತರೆ ಹರಕೆ ಹೊತ್ತು, ಓಂ ನಮಃ ಶಿವಾಯ ಎಂಬ ಉದ್ಧಾರದೊಂದಿಗೆ ಭಕ್ತಿ ಮೆರೆದರು. ಮಹೇಶ್ವರ ಜಾತ್ರೆಗೆ ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸವಿದೆ. ನಂತರ ಗಂಗಾಪೂಜೆ ನಡೆಸಿ ಪ್ರಸಾದ ವಿನಿಯೋಗ ಜರುಗಿತು. ಜಾತ್ರೆಯಲ್ಲಿ ತಯಾರಿಸುವ ಸಾತ್ವಿಕ ಆಹಾರವಾದ ಅನ್ನ, ಬೆಲ್ಲ, ಹಾಲು, ಬಾಳೆಹಣ್ಣಿನ ಪ್ರಸಾದವನ್ನು ಸಾವಿರಾರು ಭಕ್ತಾದಿಗಳು ಸ್ವೀಕರಿಸಿದರು.

ಸಂಜೆ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಲಂಕಾರ, ಕೇಸರಿ ಬಣ್ಣದ ಭಂಟಿಂಗ್ಸ್, ಸ್ವಾಗತ ಕಮಾನುಗಳು, ದೇವಸ್ಥಾನದ ಹೊರಗೆ ಹೂವಿನಲಂಕಾರದ ಆಕರ್ಷಣೆಯಾಗಿತ್ತು. ಈ ಸಮಯದಲ್ಲಿ ದೇವಾಲಯದ ಸುತ್ತಾ ದೀಪಗಳನ್ನು ಹಚ್ಚುವುದರ ಮೂಲಕ ವಿಜೃಂಭಣೆಯಿಂದ ಸ್ವಾಮಿಯ ಕಡೇ ಕಾರ್ತಿಕವನ್ನು ಆಚರಣೆ ಮಾಡಲಾಯಿತು. ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...