ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 25 : ಇಂದು ಬೆಳ್ಳಂ ಬೆಳಗ್ಗಯೇ ನಡೆದ ಭೀಕರ ಬಸ್ ದುರಂತಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಘಟನೆಯಲ್ಲಿ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ಪರಿಹಾರ
ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.
ರಾಜ್ಯ ಸರ್ಕಾರವೂ ಸಹಾ ಪರಿಹಾರ ಘೋಷಿಸಿದೆ. ಮೃತರ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಸ್ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ, ಬಳಿಕ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಅದೇ ರೀತಿ, ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ ಮಾಡಿದ್ದಾರೆ.
ದುರಂತಕ್ಕೆ ಈಡಾಗಿರುವ ಸೀಬರ್ಡ್ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಆದರೆ ಹಿರಿಯೂರು ಪಟ್ಟಣದ ಬಳಿ ಎದುರಿಗೆ ಬರುತ್ತಿದ್ದ ಲಾರಿ ಡುವೈಡರ್ ಗೆ ಡಿಕ್ಕಿ ಹೊಡೆದು, ಬಸ್ ಬಂದು ಗುದ್ದಿದೆ. ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ಜೋರಾಗಿ ಆವರಿಸಿ ಬಸ್ಸಿನಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಜೊತೆಗೆ ಲಾರಿ ಚಾಲಕ ಕೂಡ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 32 ಮಂದಿ ಇದ್ದರು. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಪಘಾತ ಹಿನ್ನೆಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















