ರೈಲ್ವೆ ಟಿಕೆಟ್ ದರ ಏರಿಕೆ : ಬಿಜೆಪಿಯವರಿಗೆ ಸಿಎಂ ಸಲಹೆ ಏನು..?

1 Min Read

ದಾವಣಗೆರೆ: ಈಚೆಗಷ್ಟೆ ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರವನ್ನ ಏರಿಕೆ ಮಾಡಿದೆ. ಈ ಸಂಬಂಧ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆಯೊಂದನ್ನ ನೀಡಿದ್ದಾರೆ. ರೈಲ್ವೆ ಪ್ರಯಾಣ ದರವನ್ನ ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ಆಗಿರುವ ಈ ಹೊರೆಯನ್ನ ಬಿಜೆಪಿ ಮುಖಂಡರು ಪ್ರಶ್ನೆ ಮಾಡಲಿ ಎಂದಿದ್ದಾರೆ.

 

ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನ್ನಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧವಷ್ಟೇ ಮಾತನಾಡುವ ಬಿಜೆಪಿ ನಾಯಕರು, ರೈಲ್ವೆ ಪ್ರಯಾಣ ದರ ಏರಿಕೆಯಿಂದ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಬೇಕು ಎಂದು ಕೇಳಿದ್ದಾರೆ.

ಇನ್ನು ಚಿತ್ರದುರ್ಗದ ಬಸ್ ಆಕ್ಸಿಡೆಂಟ್ ಬಗ್ಗೆ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಬಸ್ ಅಗ್ನಿ ದುರಂತದಲ್ಲಿ ಲಾರಿ ಚಾಲಕನ ತಪ್ಪು ಇರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ತನಿಖೆ ಪೂರ್ಣಗೊಂಡ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು ಕುರ್ಚಿ ಪೈಪೋಟಿ ಬಗ್ಗೆ ಎಲ್ಲರಿಗೂ ಕುತೂಹಲವಂತು ಇದ್ದೆ ಇದೆ. ಈ ಪೈಪೋಟಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಸಿಎಂ ಕುರ್ಚಿ ಬಿಟ್ಟು ಬೇರೆ ವಿಚಾರಗಳೇ ಇಲ್ಲ ಎಂದು ಸ್ವಲ್ಪ ಗರಂ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇದೇ ವೇಳೆ ನಾಳೆ ದೆಹಲಿಗೆ ಹೋಗುತ್ತಿರುವ ಬಗ್ಗೆಯೂ ಮಾತನ್ನಾಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ವರಿಷ್ಠರು ಕರೆದಿದ್ದಾರೆ. ಶನಿವಾರ ನಡೆಯುವ ಸಭೆಗೆ ಶುಕ್ರವಾರ ಸಂಜೆ ದೆಹಲಿಗೆ ಹೊರಟಿದ್ದೇನೆ ಎಂದಿದ್ದಾರೆ.

Share This Article
Enable Notifications OK No thanks