Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಗೆ ಮಾಸ್ಕ್ ಹಾಕ್ಬೇಕು ಅನ್ನಿಸಿಲ್ಲ, ಹಾಕಿಲ್ಲ : ಸಚಿವರ ಮಾತಿಗೆ ಜನಾಕ್ರೋಶ..!

Facebook
Twitter
Telegram
WhatsApp

ಬೆಳಗಾವಿ : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗ್ತಾ ಇದೆ. ಕೊರೊನಾ ಕಂಟ್ರೋಲ್ ಗೆ ರಾಜ್ಯ ಸರ್ಕಾರ ಸಾಕಷ್ಟು ಟಫ್ ರೂಲ್ಸ್ ಜಾರಿಗೆ ತಂದಿದೆ. ಮಾಸ್ಕ್ ಹಾಕಿದ್ರೆ ಕೊರೊನಾ ಒಂದಂತಕ್ಕೆ ಹರಡುವಿಕೆ ತಪ್ಪುತ್ತೆ ಅನ್ನೋ ಉದ್ದೇಶದಿಂದ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಈ ಮಧ್ಯೆ ಮಾಸ್ಕ್ ಹಾಕದವರಿಗೆ ಅಧಿಕಾರಿಗಳು ದಂಡ ಕೂಡ ಹಾಕುತ್ತಿದ್ದಾರೆ. ಆದ್ರೆ ಸಚಿವರೇ ಮಾಸ್ಕ್ ಹಾಕದೆ, ಉಡಾಫೆ ಮಾತಾಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.

ಸಚಿವ ಉಮೇಶ್ ಕತ್ತಿ ಅವರು ಅಥಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾಸ್ಕ್ ಹಾಕಿರಲಿಲ್ಲ. ಇದನ್ನ ಪ್ರಶ್ನಿಸಿದ್ದಕ್ಕೆ ಮಾಸ್ಕ್ ಹಾಕುವುದು, ಬಿಡುವುದು ನನಗೆ ಬಿಟ್ಟಿದ್ದು, ನನಗೆ ಮಾಸ್ಕ್ ಹಾಕಬೇಕು ಅನ್ನಿಸಿಲ್ಲ. ಅದಕ್ಕೆ ಹಾಕಿಲ್ಲ ಎಂದಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿಮಂತ್ರಿ ತಿಳಿಸಿದ್ದಾರೆ. ಯಾವುದೇ ನಿರ್ಬಂಧ ವಿಧಿಸಲ್ಲ. ತಮ್ಮ ಸ್ವಂತ ನಿರ್ಧಾರವನ್ನು ತೆಗೆದುಕೊಂಡು ಮಾಸ್ಕ್ ಹಾಕಿಕೊಳ್ಳಬೇಕು. ಅದು ಅವರಿಗೆ ಬಿಟ್ಟಿದ್ದು. ಇದರಿಂದಾಗಿ ನಾನು ಮಾಸ್ಕ್ ಹಾಕಲ್ಲ ಎಂದು ಹೇಳಿದರು. ಇದು ಜನರಿಗೆ ಕೋಪ ಬರುವಂತೆ ಮಾಡಿದೆ. ಜನ ಸಾಮಾನ್ಯರು ಮಾಸ್ಜ್ ಹಾಕಿಲ್ಲ ಎಂದರೆ ದಂಡ ವಿಧಿಸುತ್ತಾರೆ. ಸಚಿವರು ಹಾಕಿಲ್ಲ ಅಂದ್ರೆ ಕ್ರಮ ಇಲ್ಲವಾ ಎಂದು ಆಕ್ರೋಶಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!