Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಶ್ರೀ ಕೋಟೆಗುಡ್ಡ ಮಾರಮ್ಮ ಜಾತ್ರೆಗೆ ಸಕಲ ಸಿದ್ಧತೆ

---Advertisement---

 

ಸುದ್ದಿಒನ್, ಮೊಳಕಾಲ್ಮುರು, ಜನವರಿ. 04 : ಶೂನ್ಯಮಾಸದ ಜಾತ್ರೆಗಳಲ್ಲಿ ಜಿಲ್ಲೆಯಲ್ಲಿಯೇ ಬಹಳಷ್ಟು ಪ್ರಸಿದ್ಧವಾಗಿರುವ ತಾಲ್ಲೂಕಿನ ರಾಯಾಪುರದ ಮ್ಯಾಸರಹಟ್ಟಿಯಲ್ಲಿ ನೆಲೆಸಿರುವ ಕೋಟೆಗುಡ್ಡ ಮಾರಮ್ಮ ದೇವಿ’ ಜಾತ್ರೆ ಜ.06ರಂದು ಆರಂಭವಾಗಲಿದೆ.

ಈಗಾಗಲೇ ಗ್ರಾಮದಲ್ಲಿ ಜಾತ್ರೆಗೆ ಸಕಲ ಸಿದ್ಧತೆಗಳು ಆರಂಭವಾಗಿದ್ದು, ಅಂಗಡಿ–ಮುಂಗಟ್ಟುಗಳನ್ನು ಹಾಕಲಾಗುತ್ತಿದೆ. ದೇವಸ್ಥಾನಕ್ಕೆ ಸುಣ್ಣಬಣ್ಣ ಬಳಿದು ಅಲಂಕಾರ ಮಾಡಿ ಜಾತ್ರೆಗೆ ಸಿದ್ಧಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಜಾತ್ರೆಯ ಅಂಗವಾಗಿ ಜ,06ಬೆಳಿಗ್ಗೆ ಗಂಗಾಪೂಜೆ, ಸಂಜೆ ಅಗ್ನಿಕುಂಡ, ಕಾಸು ಮೀಸಲು ಅರ್ಪಣೆ ನಡೆಯಲಿದೆ.07ರಂದು ಬೆಳಿಗ್ಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಸಂಜೆ ವೀರಪೋತ ರಾಜುಲು’ ಅವರಿಂದ ಪೂಜೆ, ವಿಶೇಷವಾಗಿ ಜ,08 ಗುರುವಾರ ಸಂಜೆ 4.30ಕ್ಕೆ ಪ್ರಸಿದ್ಧ ’ಸಿಡಿ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ. 09ರಂದು ಬೆಳಿಗ್ಗೆ ದೇವಿಯನ್ನು ಗುಡಿ ತುಂಬಿಸುವ ಮೂಲಕ ಜಾತ್ರೆಗೆ ತೆರೆ ಬೀಳಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.

ಹಿನ್ನೆಲೆ: ಹಾನಗಲ್‌ ಸಮೀಪ ಇರುವ ಕೋಟೆಗುಡ್ಡ ಮಾರಮ್ಮದೇವಿ ಮೂಲ ಸ್ಥಳವಾಗಿದ್ದು, ನಂತರ ದೇವಿ ಹಾನಗಲ್‌ ಹಾಗೂ ನೆರೆಯ ಆಂಧ್ರದ ರಾಯದುರ್ಗದಲ್ಲಿ ನೆಲೆಸಿ ಕಳೆದ ನಾಲ್ಕು ದಶಕಗಳ ಹಿಂದೆ ರಾಯಾಪುರದ ದೇವರಹಟ್ಟಿಯಲ್ಲಿ ಬಂದು ನೆಲೆ ನಿಂತಿದೆ.

‘ಹರಕೆ ತೀರಿಸುವ ದೇವಿ’ ಎಂದೇ ಪ್ರಸಿದ್ಧವಾಗಿರುವ ಈ ದೇವಿಗೆ ಬಳೆ, ಹೂವು ಅರ್ಪಣೆ ವಿಶೇಷವಾಗಿ ನಡೆ ಯುತ್ತದೆ. ಇದನ್ನು ಬೆಂಗಳೂರು–
ಬಳ್ಳಾರಿ ರಾಜ್ಯ ಹೆದ್ದಾರಿಗೆ ಅಂಟಿಕೊಂಡಿರುವ ಸ್ಥಳದಲ್ಲಿ ಕಾಣಬಹುದು ಎಂದು ದೇವಸ್ಥಾನ ಪೂಜಾರಿ ನಾಗೇಂದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now