Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ | ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜನವರಿ. 05 : ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನನ್ನಿವಾಳ ಗ್ರಾಮದ ಯುವಕನೊಬ್ಬ ತನ್ನ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.

ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಹಿತಿ ತಿಳಿದು ತಕ್ಷಣವೇ 112 ಹೊಯ್ಸಳ ಪೊಲೀಸ ಸ್ಥಳಕ್ಕೆ ಆಗಮಿಸಿ ಯುವಕನನ್ನು ಆಸ್ಪತ್ರೆಗೆ ಸಾಗಿಸಲು ಆಟೋ ಚಾಲಕರನ್ನು ಕೂಗಿದಾಗ ಯಾವೊಬ್ಬ ಆಟೋ ಚಾಲಕರು ಯುವಕನ ರಕ್ಷಣೆಗೆ ಧಾವಿಸಲಿಲ್ಲ. ಆಟೋ ನಿಲ್ದಾಣದಲ್ಲಿ ಈ ಘಟನೆ ನಡೆದರೂ ಸಹ ಆಟೋ ಚಾಲಕರು ಮಾನವೀಯತೆ ತೋರದೆ ನಮಗೆ ಸಂಬಂಧ ಇಲ್ಲವಂತೆ ವರ್ತನೆ ಮಾಡಿದ್ದಾರೆ.

ಪೊಲೀಸರು ಖಾಸಗಿ ಬಸ್ ನಿಲ್ದಾಣ ಸಮೀಪ ನಿಲ್ಲಿಸಿದ ಮತ್ತೊಂದು ಆಟೋ ತಂದು ಗಾಯಗೊಂಡಿದ್ದ ಯುವಕನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ಸಾಗಿಸಿದ್ದಾರೆ.

ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಯಾಕೆ ಎಂಬುದು ಪೊಲೀಸರ ತನಿಖೆಯ ನಂತರವೇ ತಿಳಿದು ಬರಲಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಶಿವರಾಜ್ ಪೊಲೀಸ್ ಪೇದೆಗಳದ ಚೌಹಾಣ್ ಹಾಗೂ ಸಂತೋಷ್ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...