ಬಳ್ಳಾರಿ : ಬ್ಯಾನರ್ ಗಲಾಟೆಯ ಬಳಿಕ ಬಳ್ಳಾರಿಯಲ್ಲಿ ಒಂದಷ್ಟು ಬದಲಾವಣೆಗಳು ಆಗಿವೆ. ಅದರಲ್ಲೂ ಡಿಜಿಪಿ ಹಾಗೂ ಎಸ್ಪಿಯ ಬದಲಾವಣೆಯೂ ಆಗಿದೆ. ಬಳ್ಳಾರಿಯಲ್ಲಿ ಶಾಂತಿ ಕಾಪಾಡಬೇಕು ಎಂಬ ಉದ್ದೇಶದಿಂದ ಹಲವು ಬದಲಾವಣೆಗಳನ್ನ ತರಲಾಗಿದೆ. ಇನ್ನು ಇಂದೇ ಐಜಿಪಿ ಅಧಿಕಾರ ಸ್ವೀಕಾರ ಮಾಡಿರುವ ಡಾ.ಹರ್ಷ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಇವತ್ತು ಸರ್ಕಾರದ ಆದೇಶದಂತೆ ಬಳ್ಳಾರಿಯ ವಲಯದ ಐಜಿಪಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಈ ವಲಯದಲ್ಲಿ ನಾಲ್ಕು ಜಿಲ್ಲೆಗಳಿವೆ. ಹೆಡ್ ಕ್ಚಾರ್ಟರ್ ಆಗಿ ಬಳ್ಳಾರಿ ಇದೆ. ನಾನು ರಿಪೋರ್ಟ್ ಮಾಡಿಕೊಂಡ ಮೇಲೆ ಎಲ್ಲಾ ಅಧಿಕಾರಿಗಳ ಜೊತೆಗೆ ಸಣ್ಣದೊಂದು ಸಭೆ ನಡೆಸಿದ್ದೇನೆ. ನನಗೂ ಕೂಡ ಒಂದಷ್ಟು ಸಲಹೆಗಳು ಸಿಕ್ಕಿವೆ. ಕಾನೂನನ್ನು ಭದ್ರಪಡಿಸುವಂತಹ ಸರಿಯಾದ ಸಲಹೆಗಳನ್ನ ನಮ್ಮ ಹಿರಿಯ ಅಧಿಕಾರಿಗಳು ಸಹ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ನಮ್ಮ ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಘಟನೆಗಳ ಬಗ್ಗೆ ಮಾಹಿತಿಯನ್ನ ಪಡೆಯುತ್ತೇನೆ. ಕೆಲವು ಪ್ರಕರಣಗಳ ಸಂಬಂಧ ತನಿಖೆಯನ್ನು ನಡೆಸುತ್ತೇನೆ ಎಂದಿದ್ದಾರೆ. ಸದ್ಯ ಬ್ಯಾನರ್ ಗಲಾಟೆಯಲ್ಲಿ ಆದಂತ ಸಾವಿನ ತನಿಖೆಯು ನಡೆಯುತ್ತಿದೆ. ರಾಜಶೇಖರ್ ದೇಹದಲ್ಲಿ ಹೊಕ್ಕ ಗುಂಡು, ಫೈಯರ್ ಆಗಿದ್ದೇಗೆ ಇದೆಲ್ಲದಕ್ಕೂ ಸಂಬಂಧ ಪಟ್ಟಂತೆ ಸಿಸಿಟಿವಿ ವಿಡಿಯೋ ಕೂಡ ವೈರಲ್ ಆಗಿದೆ. ಇದರ ತನಿಖೆಯೂ ಮುಂದುವರೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















