Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಅವರು ಸ್ಥಾನ ಬಿಡೋದು ಯಾವಾಗ..? ಕೋಡಿಮಠದ ಶ್ರೀಗಳು ನುಡಿದ ಭವಿಷ್ಯವೇನು..?

---Advertisement---

ರಾಯಚೂರು: ಕಾಂಗ್ರೆಸ್ ಸರ್ಕಾರದಲ್ಲಿ ಮೊದಲೇ ಸಿಎಂ ಖುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪ್ರಸ್ತುತ ಕೂಡ ಕುರ್ಚಿಗಾಗಿ ಪ್ರಯತ್ನ ಪಡ್ತಾ ಇದ್ದಾರೆ. ಆದರೆ ಅದ್ಯಾಕೋ ಅದು ಸಾಧ್ಯವಾಗ್ತಾ ಇಲ್ಲ. ಇದೀಗ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಸಂಬಂಧ ಕೋಡಿಶ್ರೀ ಗಳು ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಬಂದಾಗ ಏನಾದರೂ ಬದಲಾಗುವ ಸೂಚನೆಗಳಿರುತ್ತವೆ. ಅದರಲ್ಲೂ ರಾಜಕೀಯದಲ್ಲಿ. ಆ ಬಗ್ಗೆ ಮಾತನಾಡಿರುವ ಕೋಡಿ ಮಠದ ಶ್ರೀಗಳು, ಸಂಕ್ರಾಂತಿ, ಯುಗಾದಿ ಅಂತ ಅಲ್ಲ. ಬಜೆಟ್ ಮಂಡನೆ ತನಕ ಏನು ಹೇಳಲು ಸಾಧ್ಯವಿಲ್ಲ ಎಂಬ ಮಾತನ್ನ ಹೇಳಿದ್ದಾರೆ.

ಜ್ಯೋತಿಷ್ಯವನ್ನು ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತ ಹೇಳುತ್ತಾರೆ. ಸಂಕ್ರಾಂತಿಯಲ್ಲಿ ಸೂರ್ಉ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕಾಗಿದೆ. ಅಲ್ಲಿ ತನಕ ಏನನ್ನು ಹೇಳಲು ಸಾಧ್ಯವಿಲ್ಲ ಎಂದೇ ಹೇಳಿದ್ದಾರೆ.

ಇದೇ ವೇಳೆ ಡಿಕೆ ಶಿವಕುಮಾರ್ ಬಗ್ಗೆ ಮಾತನ್ನಾಡುತ್ತಾ, ಆತ ಒಳ್ಳೆಯ ಕಾರ್ಯಕರ್ತ, ಸಂಘಟನೆ ಮನುಷ್ಯ, ಹೋರಾಟಗಾರ. ಆದ್ರೆ ಇಲ್ಲಿ ಸಂಘಟನೆ ಪ್ರಶ್ನೆ ಬರುವುದಿಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡ್ತಾರಾ? ಇಲ್ಲವಾ? ಅನ್ನೋದನ್ನ ನೋಡಿ ಹೇಳ್ತೇನೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರಶ್ರೀ ತಿಳಿಸಿದ್ದಾರೆ. ಇಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ ಅವರು ತುಂಬಾ ಹೊತ್ತು ಮಾತನ್ನಾಡಿದ್ದಾರೆ‌. ಸಂಧಾನ ಮಾಡುವಲ್ಲಿ ಸಫಲರಾಗ್ತಾರಾ ಅಥವಾ ಸಿಎಂ ಸ್ಥಾ‌ನ ಕೊಡಿಸುವಲ್ಲಿ ಸಫಲರಾಗ್ತಾರಾ ನೋಡಬೇಕಿದೆ. ಈಗ ಕೋಡಿಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...