Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೆಳಗಟ್ಟ ಬಳಿ ಅಪಘಾತ ; ಇಬ್ಬರು ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 13 : ತಾಲ್ಲೂಕಿನ
ಬೆಳಗಟ್ಟ ಗ್ರಾಮದಲ್ಲಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ತುರುವನೂರಿನಿಂದ ಬೆಳಗಟ್ಟ ಮಾರ್ಗವಾಗಿ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಚಳ್ಳಕೆರೆ ತಾಲ್ಲೂಕಿನ
ಭೀಮಗೊಂಡನಹಳ್ಳಿ ಗ್ರಾಮದ (ಬೈರ ನಾಯಕನಹಟ್ಟಿ) ತಿಪ್ಪೇಸ್ವಾಮಿ (28 ವರ್ಷ) ಮತ್ತು ಪ್ರಭು ನಾಯಕ (42 ವರ್ಷ) ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ತುರುವನೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now