Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಗೊಂದಲ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ..!

---Advertisement---

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನ ಎದುರಿಸುತ್ತಿದೆ. ಆದರೆ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಕೆಲವರು ಈ ಮೈತ್ರಿಗೆ ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ. ಮಂಡ್ಯ ಭಾಗದಲ್ಲೂ ಈ ಸಂಬಂಧ ವಿರೋಧವಿದೆ. ಇದಕ್ಕೆ ಕುಮಾರಸ್ವಾಮಿ ಅವರನ್ನ ಮಧ್ಯ ಪ್ರವೇಶಿಸುವಂತೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ಜಿಬಿಎ ಚುನಾವಣೆ ಅಷ್ಟೇ ಅಲ್ಲ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ಚುನಾವಣೆಗಳಿಗೂ ಪಕ್ಷದ ಸಿದ್ಧತೆ ಮಾಡಿಕೊಳ್ಳಬೇಕು. ಅದೆಲ್ಲದಕ್ಕೂ ಈಗಾಗಲೇ ನಾವೂ ಕೂಡ ತಯಾರಿ ಮಾಡಿಕೊಳ್ತಾ ಇದ್ದೀವಿ. ನಮ್ಮಲ್ಲಿ ಮುಕ್ತವಾದಂತ ತೀರ್ಮಾನ ಇಟ್ಟುಕೊಂಡಿದ್ದೇವೆ. ನಮ್ಮಿಂದ ಯಾವುದೇ ರೀತಿಯಲ್ಲಿ ಮೈತ್ರಿಯ ವಿಚಾರದಲ್ಲಿ ಗೊಂದಲಕ್ಕೆ ಎಡೆ ಮಾಡಿಕೊಡಬಾರದು ಅನ್ನೋದು ನಮ್ಮಲ್ಲೂ ಇದೆ. ಮುಂದಿನ ದಿನಗಳಲ್ಲಿ ಯಾವ ಥರ ರಾಜಕೀಯದ ಬೆಳವಣಿಗೆ, ಸ್ಥಳೀಯ ಸಂಸ್ಥೆಗಳ ಬಗ್ಗೆ, ಸ್ಥಳೀಯವಾಗಿ ನಮ್ಮ ಬಿಜೆಪಿ ನಾಯಕರುಗಳ ತೀರ್ಮಾನ ಏನಿದೆ ಇದೆಲ್ಲವನ್ನು ನೋಡಿಕೊಂಡು ತೀರ್ಮಾನ ಮಾಡುತ್ತೇವೆ.

ಕಾಂಗ್ರೆಸ್ ದುರಾಡಳಿತ ಈ ರಾಜ್ಯದಿಂದ ಹೋಗಬೇಕು. ಅದು ನಮ್ಮ ಪಕ್ಷದ ಉದ್ದೇಶ. ಅದಕ್ಕೆ ನಾವೂ ತಯಾರಾಗಿದ್ದೀವಿ. ಆ ವಿಷಯದಲ್ಲಿ ಎಲ್ಲಾ ರೀತಿಯ ಮುಕ್ತವಾದ ತೀರ್ಮಾನವನ್ನು ಮಾಡಿದ್ದೇವೆ. ಬೆಂಗಳೂರು ನಗರ ಹಲವಾರು ವರ್ಷಗಳಿಂದ ಅಭಿವೃದ್ದಿ ಎಂಬಂತದ್ದು ಸಂಪೂರ್ಣವಾಗಿ ಸ್ಥಗಿತವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಲೂಟಿ ಆಗ್ತಾ ಇದೆ. ಕಸ ವಿಲೇವಾರಿ, ಗುಂಡಿ ಮುಚ್ಚೋದು ಯಾವ್ಯಾವ ಪಕ್ಷಗಳ ನಡವಳಿಕೆ, ಯಾವ್ಯಾವ ಪಕ್ಷಗಳ ಕಾಣಿಕೆ ಏನಿದೆ..? ಇದೇ ವಿಚಾರಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಹೋಗಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now