Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹ್ಯಾರಿಸ್ ಪುತ್ರ ನಲಪಾಡ್ ಮೇಲೆ ಹಲ್ಲೆ ಆರೋಪ : ಅಧ್ಯಕ್ಷ ಸ್ಥಾನ ತಪ್ಪಿಸಲು ಪಿತೂರಿ ಎಂದ ನಲಪಾಡ್..!

Facebook
Twitter
Telegram
WhatsApp

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮೇಲೆ ಮತ್ತೆ ಹಲ್ಲೆ ಆರೋಪ ಎದುರಾಗಿದೆ. ಬಳ್ಳಾರಿ ಗ್ರಾಮೀಣ ಯು ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೆಗೌಡ ಈ ಆರೋಪ ಮಾಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಸ್ಪಷ್ಟನೆ ನೀಡಿದ ನಲಪಾಡ್, ನನಗೆ ಅಧ್ಯಕ್ಷ ಸ್ಥಾನ ತಪ್ಪಿಸಲು ನನ್ನವರೇ ಇರಬಹುದು ಅಥವಾ ವಿರೋಧಿಸುವವರು ಇರಬಹುದು ಈ ರೀತಿ ಮಾಡ್ತಾ ಇದ್ದಾರೆ. ನನಗೂ ಈ ಬಗ್ಗೆ ಗೊತ್ತಿಲ್ಲ. ಬೆಳಗ್ಗೆ ವಾಟ್ಸಾಪ್ ನೋಡಿ ಆಶ್ಚರ್ಯ ಆಯ್ತು. ನಿನ್ನೆ ರಾತ್ರಿ ಅವರವರೇ ಸೇರಿಕೊಂಡು ಊಟ ಮಾಡಿಕೊಂಡಿದ್ರು. ಇದರಲ್ಲಿ ನನ್ನ ವಿರುದ್ಧ ಪಿತೂರಿ ಇದೆ. ಈ ಹಿಂದೆಯೂ ಅಧ್ಯಕ್ಷ ಸ್ಥಾನ ತಪ್ಪಿಸಲು ಗಲಾಟೆ ಮಾಡಿದ್ರು.

ಎಲ್ಲಾ ಜಿಲ್ಲಾಧ್ಯಕ್ಷರ ಜೊತೆ ನನಗೆ ಒಳ್ಳೆ ಬಾಂಧವ್ಯವಿದೆ. ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ. 10 ದಿನದಲ್ಲಿ ಅಧ್ಯಕ್ಷ ನಾಗಿ ಅಧಿಕಾರ ಸ್ವೀಕರಿಸಬೇಕು. ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದು‌ ನಿಜ. ಸಂಜೆ ಊಟಕ್ಕೆ ಎಲ್ಲರು ಸೇರಿದ್ರು. ಗಲಾಟೆ ಆಗಿಲ್ಲ ಅಂತ ಸಿದ್ದು ಸಹ ಹೇಳ್ತಿದ್ದಾರೆ. ನಾನು ರಾತ್ರಿನೇ ಹೊಟೇಲ್‌ನಿಂದ ವಾಪಾಸ್ ಬಂದಿದೆ.

ಪದೇ ಪದೇ ನನ್ನ ಮೇಲೆ ಆರೋಪ ಬರುತ್ತಲೆ ಇದೆ. ಎಲ್ಲರಿಂದಲೂ ಮಾಹಿತಿ ಪಡೆದುಕೊಳ್ಳಿ. ನನಗೆ ಎಲ್ಲಾ ಜಿಲ್ಲಾಧ್ಯಕ್ಷರ ಜೊತೆ ಒಳ್ಳೆ ಬಾಂಧವ್ಯ ಇದೆ. ಫೆಬ್ರವರಿಯಿಂದ ಅಧ್ಯಕ್ಷನಾಗಿ ಅಧಿಕಾರ ಅಂತ ಆರ್ಡರ್ ಆಗಿದೆ. ಯಾರು ಬಂದು ಬದಲಾವಣೆ ಮಾಡ್ಬೇಕು ಅನ್ನೋದು ಇಲ್ಲ. ಈ ರೀತಿ ಗಲಾಟೆ ಆಗಿರೋದ್ರಿಂದ ಅಧ್ಯಕ್ಷ ಸ್ಥಾನ ತಪ್ಪುತ್ತೆ ಅನ್ನೋದೆಲ್ಲ ಭ್ರಮೆ. ಯುವಕರನ್ನೆಲ್ಲಾ ಸೇರಿಸಬೇಕು ಅನ್ನೋ ಉದ್ದೇಶ. ಅಧ್ಯಕ್ಷನಾಗಿ ಮನೆ ಕಟ್ಟಿಕೊಳ್ಳಲು ಮಾಡ್ತಿಲ್ಲ. ಪಕ್ಷ ಕಟ್ಟೋದಕ್ಕೆ ಅಧ್ಯಕ್ಷ ಸ್ಥಾನಕ್ಕೆ ಹೋಗ್ತಾ ಇರೋದು ಎಂದು ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!