ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಸರ್ಕಾರ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದೆ. ರಾಮಚಂದ್ರ ರಾವ್ DCRE DGP ಆಗಿ ಕೆಲಸ ಮಾಡುತ್ತಿದ್ದರು. ಬೆಳಗಾವಿಯಲ್ಲಿ ಐಜಿಪಿ ಆಗಿದ್ದಾಗ ನಡೆಸಿದ ರಾಸಲೀಲೆ ವಿಡಿಯೋಗಳು ಈಗ ವೈರಲ್ ಆಗಿವೆ. ಅದರಲ್ಲೂ ಒಂದು ವಿಡಿಯೋ ಅಲ್ಲ ಹಲವು ಮಹಿಳೆಯರ ಜೊತೆಗೆ ಯೂನಿಫಾರ್ಮ್ ನಲ್ಲಿಯೇ ಸರಸವಾಡಿದ್ದರು.
ವಿಡಿಯೋ ವೈರಲ್ ಬೆನ್ನಲ್ಲೇ, ಅಧಿಕಾರಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ವಿರುದ್ಧ ತಡವಾಗಿ ಸರ್ಕಾರ ಕ್ರಮಕೈಗೊಂಡಿತಾ ಎಂಬ ಪ್ರಶ್ನೆಯೂ ಎದ್ದಿದೆ. ಅಧಿವೇಶನದಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಈಗ ಸಸ್ಪೆಂಡ್ ಮಾಡಿದೆ ಎನ್ನಲಾಗುತ್ತಿದೆ. ಜನವರಿ 24ಕ್ಕೆ ವಿಶೇಷ ಜಂಟಿ ಅಧಿವೇಶನವನ್ನು ಸರ್ಕಾರ ಕರೆದಿದೆ. ಇನ್ನು ಅಧಿವೇಶನದಲ್ಲಿ ಡಿಜಿಪಿ ಪ್ರಕರಣ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಪ್ಲಾನ್ ಮಾಡಿದೆ. ವಿಪಕ್ಷಗಳ ಬಾಯಿಗೆ ಆಹಾರವಾಗದೇ ಇರಲು ಡಿಜಿಪಿ ಅಮಾನತು ಮಾಡಿದೆ.
ಡಿಜಿಪಿ ರಾಮಚಂದ್ರ ರಾವ್ ಅವರು ಈ ಸಂಬಂಧ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದರು. ಈ ವಿಡಿಯೋ ನನ್ನದಲ್ಲ, ಇದರ ಬಗ್ಗೆ ತನಿಖೆ ಆಗ್ಲಿ ಅಂತ ರಾಮಚಂದ್ರ ರಾವ್ ಅವರೇ ತಿಳಿಸಿದ್ದರು. ನಿನ್ನೆಯೆಲ್ಲಾ ವಿಡಿಯೋ ಲೀಕ್ ಆಗಿತ್ತು. ಇಂದು ಬೆಳಗ್ಗೆ ರಾಸಲೀಲೆಯ ಆಡಿಯೋ ಲೀಕ್ ಆಗಿದೆ. ಇದೀಗ ವಿಚಾರದ ಗಂಭೀರತೆಯನ್ನು ಅರಿತ ಸರ್ಕಾರ ಅಮಾನತು ಮಾಡಿ, ಆದೇಶ ಹೊರಡಿಸಿದೆ.










