Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಖಿಲೇಶ್ ಯಾದವ್ ಗೆ ಮತ್ತೊಂದು ಶಾಕ್ ! ಬಿಜೆಪಿ ಸೇರಿದ ಮಾಜಿ ಶಾಸಕ ಪ್ರಮೋದ್ ಗುಪ್ತಾ

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳಲ್ಲೂ ನಾಯಕರ ಪಕ್ಷಾಂತರ ಪರ್ವ ಮುಂದುವರಿದಿದೆ.

ಸಮಾಜವಾದಿ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಎಸ್‌ಪಿ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಸಂಬಂಧಿ ಮಾಜಿ ಶಾಸಕ ಪ್ರಮೋದ್ ಗುಪ್ತಾ ಗುರುವಾರ ಬಿಜೆಪಿ ಸೇರಿದ್ದಾರೆ.

ಬುಧವಾರ ಮುಲಾಯಂ ಸಿಂಗ್ ಯಾದವ್ ಸೊಸೆ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪ್ರಮೋದ್ ಗುಪ್ತಾ ಜೊತೆಗೆ ಮಾಜಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಮೌರ್ಯ ಕೂಡ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ, ಪ್ರಿಯಾಂಕಾ ಮೌರ್ಯ ಪೋಸ್ಟರ್ ಗರ್ಲ್ ಆಗಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ಕಾಂಗ್ರೆಸ್ ಪಕ್ಷವು ಪ್ರಾರಂಭಿಸಿದ ‘ಲಡ್ಕಿ ಹೂ, ಲಡ್ ಶಕ್ತಿ ಹೂ’ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅವರು ಬಿಜೆಪಿ ಸೇರಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈಗಾಗಲೇ ಮೂವರು ಸಚಿವರು ಸೇರಿದಂತೆ ಹಲವು ಶಾಸಕರು ಬಿಜೆಪಿ ಪಕ್ಷ ತೊರೆದಿದ್ದು, ಒಬಿಸಿ ವಲಯದಲ್ಲಿ ಸಂಕಷ್ಟದಲ್ಲಿರುವ ಬಿಜೆಪಿಗೆ ಮುಲಾಯಂ ಅವರ ಕಿರಿಯ ಸೊಸೆ ಮತ್ತು ಸಂಬಂಧಿ ಬಿಜೆಪಿ ಸೇರಿರುವುದು ಕೊಂಚ ಸಮಾಧಾನ ತಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!