Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜ.27ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

---Advertisement---

ಚಿತ್ರದುರ್ಗ. ಜ. 23: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ನಗರ ಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಸಹಯೋಗದಲ್ಲಿ ನಗರದ ಶ್ರೀ ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪ್ಪದಲ್ಲಿ ಇದೇ ಜ.27 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಢಕ ವಿತಾರಣಾ ಶಿಬಿರ ಆಯೋಜಿಸಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತರಿರುವರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಶ್ರೀರಾಮ್, ನಗರಸಭೆ ಕೌನ್ಸಿಲರ್ ಜೆ.ಶಶಿಧರ್, ನಗರಸಭೆ ಮಾಜಿ ಉಪಧ್ಯಾಕ್ಷ ಮಲ್ಲಿಕಾರ್ಜುನ  ಎಸ್.ಪಿ, ಸದಸ್ಯರಾದ ವೇದಪ್ರಕಾಶ್, ಮೀನಾಕ್ಷಿ ಆಗಮಿಸುವರು.

ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗವಹಿಸುವರು.

ಹೆಚ್ಚಿನ ವಿವರಗಳಿಗಾಗಿ ಶಾಸಕರ ಕಾರ್ಯಾಲಯ 9591515031/7996768003, ಶಂಕರ ಕಣ್ಣಿನ ಆಸ್ಪತ್ರೆ. 08182-222099/08182-2221000 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now