Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧಿವೇಶನದ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲು ರಾಜ್ಯಪಾಲರು ಹಿಂದೇಟು : ಕಾರಣವೇನು..?

---Advertisement---

ಬೆಂಗಳೂರು: ಈಚೆಗಷ್ಟೇ ವಿಶೇಷ ಅಧಿವೇಶನದ ಭಾಷಣ ಓದಲು ರಾಜ್ಯಪಾಲರು ಹಿಂದೇಟು ಹಾಕಿ, ಗದ್ದಲ ನಿರ್ಮಾಣ ಮಾಡಿದ್ದರು. ಇದೀಗ ಗಣರಾಜ್ಯೋತ್ಸವದ ಭಾಷಣ ಮಾಡುವುದಕ್ಕೂ ರಾಜ್ಯಪಾಲರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಕೂಡ ಗಣರಾಜ್ಯೋತ್ಸವದ ದಿನ ರಾಜ್ಯಪಾಲರು ಭಾಷಣವನ್ನ ಓದುತ್ತಾರೆ. ಈ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರು ಮಾಡುತ್ತದೆ. ಆದರೆ ಈ ಬಾರಿ ರಾಜ್ಯ ಸರ್ಕಾರ ತಯಾರಿ ಮಾಡಿರುವ ಭಾಷಣವನ್ನು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಾರೆ.

ಅದಕ್ಕೆ ಕಾರಣ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳು ಇದಾವೆ ಎಂಬುದು ತಿಳಿದು ಬಂದಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಅನುದಾನ ಹಂಚಿಕೆಯಲ್ಲಿ ನಡೆಯುತ್ತಿರುವ ತಾರತಮ್ಯ,‌ ಮಲತಾಯಿ ಧೋರಣೆ ಸೇರಿದಂತೆ ಹಲವು ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಈ ಅಂಶಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವಂತೆ ಇರುವ ಕಾರಣಕ್ಕೆ ರಾಜ್ಯಪಾಲರು ಅಂತಹ ಭಾಷಣವನ್ನು ಓದುವುದಿಲ್ಲ ಎನ್ನುತ್ತಿದ್ದಾರಂತೆ.

 

ಇನ್ನು ರಾಜ್ಯಪಾಲರಾದ ಗೆಹ್ಲೋಟ್ ಅವರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ಅಂಶಗಳಿದ್ದರೆ ಅದನ್ನು ಓದಲು ಸಾಧ್ಯವಿಲ್ಲ. ಸರ್ಕಾರ ತಿದ್ದುಪಡಿ ಮಾಡದೆ ಇದ್ದರೆ ನಾನೇ ಸಿದ್ಧಪಡಿಸಿದ ಭಾಷಣವನ್ನು ಓದಿ ಮುಗಿಸುತ್ತೇನೆ ಎಂದಿದ್ದಾರೆ. ಈಚೆಗಷ್ಟೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಸದ್ದು ಗದ್ದಲ ಹೆಚ್ಚಾಗಿತ್ತು. ಭಾಷಣದ ಕೆಲವು ಭಾಗಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ಮೊದಲೇ ಸೂಚನೆ ನೀಡಿದ್ದರು. ಆದರೆ ರಾಜ್ಯಪಾಲರಿಂದ ಭಾಷಣ ಓದಿಸಿಯೇ ಸಿದ್ಧ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿದಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now