Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇಶದ ಅಭಿವೃದ್ಧಿಗೆ ಯುವ ಮತದಾರರ ಮತದಾನ ಕಡ್ಡಾಯ : ನ್ಯಾ. ಸಮೀರ್ ಪಿ ನಂದ್ಯಾಲ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜನವರಿ. 25 : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬ ಘೋಷವಾಕ್ಯ ತಪ್ಪಾಗಿದೆ. ಇಂದಿನ ಮಕ್ಕಳು ಸಹ ಇಂದಿನ ಪ್ರಜೆಗಳೇ ಆಗಿದ್ದಾರೆ. ಎಲ್ಲ ಮಕ್ಕಳಿಗೂ ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ ಎಂದು ಜೆ ಎಂ ಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಮೀರ್ ಪಿ ನಂದ್ಯಾಲ್ ತಿಳಿಸಿದರು.

 

ನಗರದ ತಾಲೂಕು ಕಚೇರಿ ಆವರಣದಲ್ಲಿ ಚುನಾವಣೆ ಇಲಾಖೆ ಹಾಗೂ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ನಂತರ ಮಾತನಾಡಿ, ಮತದಾನದ ದಿನ 18 ವರ್ಷ ಮೇಲ್ಪಟ್ಟ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಾಗ ಮಾತ್ರ ಶೇಕಡ ನೂರರಷ್ಟು ಮತದಾನ ವಾಗಲು ಸಾಧ್ಯವಾಗುತ್ತದೆ. ಮತದಾನದ ದಿನ ರಜೆ ನೀಡುವುದರಿಂದ ಮತದಾನ ಮಾಡದೆ ಪ್ರವಾಸಕ್ಕೆ ತೆರಳುವುದು ಗೀಳಾಗಿದೆ. ಅವಿದ್ಯಾವಂತರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ವಿದ್ಯಾವಂತರು ಮತದಾನದ ಬಗ್ಗೆ ನಿರಾಸಕ್ತಿ ತೋರಿಸುತಿರುವುದರಿಂದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಯುವ ಮತದಾರರು ಮುಂದಿನ ದಿನಗಳಲ್ಲಿ ಮತದಾನವನ್ನು ಕಡ್ಡಾಯವಾಗಿ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇತ್ತೀಚಿನ ದಿನಗಳ ಚುನಾವಣೆಗಳಲ್ಲಿ ವ್ಯಕ್ತಿಗಿಂತ ವಿಚಾರಗಳಿಗೆ ಮತ ಹಾಕಬೇಕು ಎಂಬ ನಿಲುವು ಮಾಧ್ಯಮಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಾಗಿ ವ್ಯಕ್ತವಾಗುತ್ತಿದೆ. ಯುವ ಮತದಾರರು ಆಮಿಷಗಳಿಗೆ ಒಳಗಾಗದೆ ಮತ ನೀಡಿದಾಗ ಮಾತ್ರ ಜವಾಬ್ದಾರಿಯುತ ಜನಪ್ರತಿನಿಧಿ ಆಯ್ಕೆಯಾಗಿ ದೇಶದ ಅಭಿವೃದ್ಧಿಯಲ್ಲಿ ತೊಡಗುತ್ತಾರೆ. ಮಾನವನ ಜೀವನ ಮೊದಲು ವೀಲ್ಸ್ ಗಳಲ್ಲಿ ಪ್ರಾರಂಭವಾಗಿ ಇಂದು ವಾಟ್ಸಾಪ್ ಯುನಿವರ್ಸಿಟಿ ಯಾಗಿ ಮಾರ್ಪಟ್ಟಿದ್ದು ರೀಲ್ಸ್ ಗಳ ಮೂಲಕ ಜೀವನವನ್ನು ಅಧಃಪತನದತ್ತ ಸಾಗುತ್ತಿದ್ದೇವೆ. 2011 ರಿಂದ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ನನ್ನ ಮತ ನನ್ನ ಭಾರತ ಎಂಬ ಘೋಷ ವಾಕ್ಯದೊಂದಿಗೆ ಹದಿನಾರನೇ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅರ್ಹ ಎಲ್ಲಾ ಮತದಾರರು ಮತದಾನ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್‌. ಅಶ್ವತ ನಾಯಕ ಉಪಾಧ್ಯಕ್ಷರಾದ ಶ್ಯಾಮಲ ಮಾತನಾಡಿದರು. ಈ ವೇಳೆ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಓ ಹೆಚ್ . ಶಶಿಧರ್ ತಹಸೀಲ್ದಾರ್ ರೆಹಾನ್ ಪಾಷ, ಸರ್ಕರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ ವೀರೇಶ್, ರೇಷ್ಮಾ ಹಾನಗಲ್, ಬಿಇಓ ಕೆ ಎಸ್ .ಸುರೇಶ್ ಆಹಾರ ನಿರೀಕ್ಷಕ ಶ್ರೀನಿವಾಸ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ದೇವಲ ನಾಯ್ಕ್ ಬಿಸಿಎಂ ಅಧಿಕಾರಿ ರಮೇಶ್ ,ಶಿವರಾಜ್ ತಾಲ್ಲೂಕಿ ಕಚೇರಿ ಶ್ರೀನಿವಾಸ್ ಸೇರಿದಂತೆ ಹಾಸ್ಟನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now