Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮೀಣ ಭಾಗದ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸರ್ಕಾರದ ಆದ್ಯತೆ : ಬಿ.ಸಿ.ವೆಂಕಟೇಶಪ್ಪ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಜ.20): ಗಡಿ ಭಾಗದ ಜನರ ಸಮಸ್ಯೆಗಳನ್ನು ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಗಡಿ ಭಾಗಗಳಲ್ಲಿ ಜಾನಪದ ಸಂಗೀತೋತ್ಸವ ಕಾರ್ಯಕ್ರಮಗಳನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ ಎಂದು ಮೊಳಕಾಲ್ಮುರು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ವೆಂಕಟೇಶಪ್ಪ ತಿಳಿಸಿದರು.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ದಿ ಪ್ರಾಧಿಕಾರ ಬೆಂಗಳೂರು, ಮಾರುತಿ ಸಾಂಸ್ಕೃತಿಕ ಕಲಾ ಸಂಘ ಆಯಿತೋಳು ಹಾಗೂ ಕೋನಸಾಗರ ಗ್ರಾಮ ಪಂಚಾಯಿತಿ ಇವುಗಳ ಸಹಯೋಗದೊಂದಿಗೆ ಕೋನಸಾಗರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜಾನಪದ ಸಂಗೀತೋತ್ಸವ ಉದ್ಘಾಟಸಿ ಮಾತನಾಡಿದರು.

ಗ್ರಾಮೀಣ ಭಾಗದ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಿ ಗಡಿ ಭಾಗದ ಜನರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಸರ್ಕಾರದ ಉದ್ದೇಶವಾಗಿರುವುದರಿಂದ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಜಾನಪದ ಕಲಾವಿದ ಡಿ.ಓ.ಮುರಾರ್ಜಿ ಮಾತನಾಡಿ ಜಾನಪದ ಸಂಗೀತೋತ್ಸವ ನಿಜವಾಗಿಯೂ ಹುಟ್ಟಿಕೊಂಡಿದ್ದು, ಗ್ರಾಮೀಣ ಭಾಗದಿಂದ ಹಾಗಾಗಿ ಗ್ರಾಮೀಣ ಜನರು ಗಡಿ ಭಾಗಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಜಾನಪದ ಸಂಗೀತೋತ್ಸವವನ್ನು ಉಳಿಸಿ ಬೆಳೆಸಿಕೊಂಸು ಹೋಗುವಂತೆ ಕರೆ ನೀಡಿದರು.

ಎಸ್.ಡಿ.ಎಂ.ಸಿ.ಅಧ್ಯಕ್ಷ ಪಡ್ಲಪಾಲಯ್ಯ, ಕೋನಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಕಲಾವಿದರಾದ ಜಿ.ಎನ್.ಚಂದ್ರಪ್ಪ, ಹೆಚ್.ಎಂ.ಕರಿಬಸಪ್ಪ, ನಾಗರಾಜು, ರಾಜಶೇಖರ, ಮಾರುತಿ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿದ್ದರು.
ಕೆ.ತಿಪ್ಪೇಶ್ ನಿರೂಪಿಸಿದರು. ಎ.ಟಿ.ಪ್ರೀತಿ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!