ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಸಚಿವರೇ ವಿಧಾನಸಭೆಯಲ್ಲಿ ಕ್ಲಾರಿಟಿಯನ್ನ ನೀಡಿದ್ದಾರೆ. ಬಿಜೆಪಿ ನಾಯಕರಲ್ಲಿ ಈ ಸಂಬಂಧ ಸಾಕಷ್ಟು ಚರ್ಚೆ ನಡೀತಾ ಇತ್ತು. ಕಲಾಪದ ವೇಳೆ ಈ ವಿಚಾರವನ್ನು ಶಾಸಕ ಸುನಿಲ್ ಕುಮಾರ್ ಅವರು ಪ್ರಸ್ತಾಪಿಸಿದರು. ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡಿದ್ದಾರೆಂದು ಸುದ್ದಿ ಎಲ್ಲೆಡೆ ಬರ್ತಾ ಇದೆ. ಮುಖ್ಯಮಂತ್ರಿಗಳ ಮಗನ ಹಸ್ತಕ್ಷೇಪ ಹೆಚ್ಚಾಗಿರುವುದರಿಂದ ಬೇಸತ್ತು ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗ್ತಾ ಇದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಬಗ್ಗೆ ಜಾರ್ಜ್ ಅವರೇ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ರಾಜೀನಾಮೆ ನೀಡಿಲ್ಲ ಮತ್ತು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಅದೆಲ್ಲವೂ ಸತ್ಯಕ್ಕೆ ದೂರವಾದ ಮಾತು. ಬಹುಶಃ ಮಾಧ್ಯಮಗಳೇ ಇಂತಹ ಸುದ್ದಿಯನ್ನು ಸೃಷ್ಟಿ ಮಾಡಿರಬೇಕು. ಮುಖ್ಯಮಂತ್ರಿಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನಾವು ನಂಬಿಕೆ ಮತ್ತು ವಿಶ್ವಾಸದಿಂದಲೇ ಸಿಎಂ ಜೊತೆಗಿದ್ದೇವೆ. ಹಸ್ತಕ್ಷೇಪದ ಮಾತುಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಮೌನವಾಗುವಂತೆ ಮಾಡಿದರು. ಈ ಸ್ಪಷ್ಟನೆಯೊಂದಿಗೆ ಸದ್ಯಕ್ಕೆ ಜಾರ್ಜ್ ರಾಜೀನಾಮೆ ವದಂತಿಗೆ ತೆರೆ ಬಿದ್ದಂತಾಗಿದ್ದು, ಬಿಜೆಪಿ ನಾಯಕರ ಕುತೂಹಲ ತಣ್ಣಗಾಗಿದೆ ಎಂದು ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಇಂದಿನ ಸದನದಲ್ಲೆಲ್ಲಾ ಬರೀ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಅದರಲ್ಲೂ ಬಿಜೆಪಿ ನಾಯಕರು ಈ ಬಗ್ಗೆ ಮಾತನ್ನಾಡಿದ್ದರು. ಇದೀಗ ಕೆ.ಜೆ.ಜಾರ್ಜ್ ಅವರೇ ಅದಕ್ಕೆ ಸ್ಪಷ್ಟ ಉತ್ತರ ನೀಡಿದ್ದಾರೆ.


